ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ ಇದರ ವತಿಯಿಂದ ದ. ಕ. ಜಿ. ಪ. ಉ. ಪ್ರಾ. ಶಾಲೆ ಮಂಕುಡೆ ಇದರ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರಮ ಸೇವೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಪೂಂಜ, ಸಂಘಟನಾ ಕಾರ್ಯದರ್ಶಿಯಾದ ಪರಮೇಶ್ವರ ಆಚಾರ್ಯ ಮಂಕುಡೆ, ಶ್ರೀ ಮಹಮ್ಮಾಯೀ ಭಜನಾ ಮಂಡಳಿ, ನಾಗವನ – ಕುಂಟ್ರಕಲ ಇದರ ಪ್ರಮುಖರಾದ ಜಯರಾಮ್ ನಾಯ್ಕ್ ಕುಂಟ್ರಕಲ, ಹಳೆ ವಿದ್ಯಾರ್ಥಿ ಯುವಕ ಮಂಡಲ ಮಂಕುಡೆ ಇದರ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮಂಕುಡೆ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಇಂದುಶೇಖರ ಮತ್ತು ಶಿಕ್ಷಕರ ವೃಂದ, ಘಟಸಮಿತಿಯ ಉಪಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಕಾರ್ಯದರ್ಶಿಯಾದ ಉಮೇಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾದ ಪ್ರೇಮ ಯಸ್. ಪೂಂಜ, ಹಾಗು ಸಂಘಟನಾ ಕಾರ್ಯದರ್ಶಿಯಾದ ಶ್ರಾವ್ಯ ಶೆಟ್ಟಿ ಉಪಸ್ಥಿತರಿದ್ದರು.
ಗ್ರಾಮ ವಿಕಾಸ ಯೋಜನೆಯ ಸಂಯೋಜಕರಾದ ಲೀಲಾ ಕೆ., ಸೇವಾ ದೀಕ್ಷಿತರಾದ ಶ್ವೇತಾ ಶೆಟ್ಟಿ ಮತ್ತು ಕುಮಾರಿ ಅರ್ಪಿತ ಸಹಕರಿಸಿದರು. ವಿಕಾಸವಾಹಿನಿಯ ಸುಮಾರು 55 ಸದಸ್ಯರು ಈ ಶ್ರಮ ಸೇವೆಯಲ್ಲಿ ಭಾಗವಹಿಸಿದರು.
ಶಾಂತಿ ಮಂತ್ರದಿಂದ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…