ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮುಲ್ಕಿ: ಸುಧಾಮ ಫೌಂಡೇಶನ್ ಸಂಯೋಜನೆಯಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಗಾರದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

ಮುಲ್ಕಿ: ಸುಧಾಮ ಫೌಂಡೇಶನ್ ಸಂಯೋಜನೆಯಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಗಾರದಲ್ಲಿ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಕಾರ್ನಾಡ್ ಲುಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಸುಧಾಮ ಫೌಂಡೇಶನ್ ಮೂಲಕ ರಾಷ್ಟ್ರೀಯತೆ ಉಳಿಸುವುದು, ಏಕತೆ ಬೆಳೆಸುವುದು,ಹಾಗೂ ಮಹಿಳೆಯರನ್ನು ಸಬಲೀಕರಣ ಗೊಳಿಸುವ ಕಾರ್ಯ ಅಭಿನಂದನೀಯ. ಮಹಿಳೆಯರು ತಮ್ಮ ಪ್ರತಿಭೆಯನ್ನು ಸದುಪಯೋಗಪಡಿಸಿ ರಾಷ್ಟ್ರದ ಹಿತಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಧಾಮ ಫೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿಯ ಉಪ ಪರಿಸರ ಅಧಿಕಾರಿ ಡಾ ಮಹೇಶ್ವರಿ ಸಿಂಗ್ ಮಾತನಾಡಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸ್ವಯಂ ಜಾಗೃತಿ ಮುಖ್ಯ, ಮಹಿಳೆಯರ ಸ್ವಾವಲಂಬನೆ ಹಾಗೂ ಪರಿಸರ ಕಾಳಜಿ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಫೌಂಡೇಶನ್ ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ. ಪಂ. ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ತರಬೇತಿಯಲ್ಲಿ ವಿವಿಧ ಸ್ವಸಹಾಯ ಗುಂಪಿನ ಪ್ರಮುಖರಾದ ರಂಜಿತಾ, ಪೂರ್ಣಿಮಾ, ಸಂಮಿತ್ರ, ರೇಖಾ, ಸೌಮ್ಯ ರವರಿಗೆ ಹಾಗೂ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಿಸಲಾಯಿತು. ತರಬೇತುದಾರ ಶಿಕ್ಷಕಿ ಸನ್ನಿತಾ ಮೋಹನ್ ಕೋಟ್ಯಾನ್ ರವರನ್ನು ಗೌರವಿಸಲಾಯಿತು.
ದಿನೇಶ್ ಕೊಲ್ನಾಡು ನಿರೂಪಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!