ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ಕೌಟಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ. ಮುಂದಿನ ವಾರ ನಡೆಯಬೇಕಾಗಿದ್ದ ಕಬ್ಬಡಿ ಪಂದ್ಯಾಟಕ್ಕೆ ಬೇಕಾದ ಊಟ ಉಪಹಾರ ಶಾಮಿಯಾನ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಲೀಲಾಧರ ಶೆಟ್ಟಿ ಅವರೇ ತಯಾರಿ ಮಾಡಿಟ್ಟಿದ್ದರು. ಇವರ ಅಂತಿಮ ದರ್ಶನ ಇಂದು ಸಂಜೆ ನಾಲ್ಕು ಗಂಟೆಗೆ ಕಾಪು ಮಜೂರು ಕರಂದಾಡಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…