ಜನ ಮನದ ನಾಡಿ ಮಿಡಿತ

Advertisement

ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಹೆಚ್ಚುವರಿ ಶಕ್ತಿ: ಎಸ್ಪಿ ಡಾ. ಕೆ. ಅರುಣ್

ಉಡುಪಿ:ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಹೆಚ್ಚುವರಿ ಶಕ್ತಿ. ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ, ಸಮಾಜಕ್ಕೆ ಉತ್ತಮ ರೀತಿಯಲ್ಲಿ ಸೇವೆ ಒದಗಿಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ನಗರದ ಕಚೇರಿ ಆವರಣದಲ್ಲಿ ಆಯೋಜಿಸಿದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು, ಪೊಲೀಸರು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದಿದ್ದಾಗ, ಗೃಹ ರಕ್ಷಕದಳ ಪೊಲೀಸರೊಂದಿಗೆ ಕೈ ಜೋಡಿಸಿಕೊಂಡು ಬಂದಿದೆ ಎಂದರು.

ಈ ಸಂದರ್ಭದಲ್ಲಿ ಗೃಹರಕ್ಷಕ ದಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾಪು ಘಟಕದ ರಾಜೇಂದ್ರ, ಮಣಿಪಾಲ ಘಟಕದ ಮಾಝಿಮ್ ಉಮ್ಮರ್ ಫಾರೂಕ್ ಹಾಗೂ ಸವಿತಾ, ಕುಂದಾಪುರ ಘಟಕದ ಸಂದೀಪ್ ದಾಸ್ ಮತ್ತು ಉಡುಪಿ ಘಟಕದ ಜಯಂತಿ ಅವರನ್ನು ಸನ್ಮಾನಿಸಲಾಯಿತು. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಸೆಕೆಂಡ್ ಇನ್ ಕಮಾಂಡೆAಟ್ ಕೆ. ಸಿ. ರಾಜೇಶ್ , ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ, ಡಾ. ವಿಜಯೇಂದ್ರ, ಗೃಹರಕ್ಷಕ ದಳದ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!