ಉಡುಪಿ:ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಹೆಚ್ಚುವರಿ ಶಕ್ತಿ. ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ, ಸಮಾಜಕ್ಕೆ ಉತ್ತಮ ರೀತಿಯಲ್ಲಿ ಸೇವೆ ಒದಗಿಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ನಗರದ ಕಚೇರಿ ಆವರಣದಲ್ಲಿ ಆಯೋಜಿಸಿದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು, ಪೊಲೀಸರು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದಿದ್ದಾಗ, ಗೃಹ ರಕ್ಷಕದಳ ಪೊಲೀಸರೊಂದಿಗೆ ಕೈ ಜೋಡಿಸಿಕೊಂಡು ಬಂದಿದೆ ಎಂದರು.
ಈ ಸಂದರ್ಭದಲ್ಲಿ ಗೃಹರಕ್ಷಕ ದಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾಪು ಘಟಕದ ರಾಜೇಂದ್ರ, ಮಣಿಪಾಲ ಘಟಕದ ಮಾಝಿಮ್ ಉಮ್ಮರ್ ಫಾರೂಕ್ ಹಾಗೂ ಸವಿತಾ, ಕುಂದಾಪುರ ಘಟಕದ ಸಂದೀಪ್ ದಾಸ್ ಮತ್ತು ಉಡುಪಿ ಘಟಕದ ಜಯಂತಿ ಅವರನ್ನು ಸನ್ಮಾನಿಸಲಾಯಿತು. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಸೆಕೆಂಡ್ ಇನ್ ಕಮಾಂಡೆAಟ್ ಕೆ. ಸಿ. ರಾಜೇಶ್ , ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ, ಡಾ. ವಿಜಯೇಂದ್ರ, ಗೃಹರಕ್ಷಕ ದಳದ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…