ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಶಾಲೆ ಸಮೀಪ ಮದ್ಯ ಸೇವನೆ; ಪ್ರಶ್ನಿಸಿದ್ದಕ್ಕೆ ಯುವಕನಿಗೆ ಚೂರಿ ಇರಿತ!!

ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.

ಸಾರಸ್ವತ ಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು ಮಂದಿಯ ನಡುವೆ ವಾಗ್ವಾದ ನಡೆದು ಸೂರಜ್, ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿದು ಹತ್ಯೆ ನಡೆಸಿದ್ದಾನೆ.

ಹಳೆ ವೈಷಮ್ಯದಿಂದ ಕೃತ್ಯ ನಡೆದಿರುವ ಸಾಧ್ಯತೆಗಳಿದ್ದು, ಸೋಮೇಶ್ವರ ಪುರಸಭೆಗೆ ಡಿ. 27 ಕ್ಕೆ ಚುನಾವಣೆಯೂ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೆಲವೇ ದಿನಗಳು ಬಾಕಿಯಿದೆ. ಈ ಸಂಬಂಧವೂ ಗಲಾಟೆ ನಡೆದಿರುವ ಸಾಧ್ಯತೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!