ಉಡುಪಿ:ಸಮಾಜ ಸೇವಕ, ಹಿರಿಯ ರಂಗ ಕಲಾವಿದ ಕೆ.ಲೀಲಾಧರ ಶೆಟ್ಟಿ ದಂಪತಿಯ ಅಕಾಲಿಕ ಮರಣದಿಂದ ಕಾಪು ತಾಲೂಕಿನ ಜನತೆ ಶೋಕ ಸಾಗರದಲ್ಲಿ ಮುಳುಗಿದೆ.
ಸಾವಿನ ಸುದ್ದಿ ತಿಳಿದು ನೂರಾರು ಮಂದಿ ಸಂಬಂಧಿಕರು, ಅಭಿಮಾನಿಗಳು, ಹಿತೈಷಿಗಳು ಮನೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ನಿನ್ನೆ ಸಂಜೆ ಕಾಪು ಪೊಲಿಪು ಜಾಮಿಯಾ ಮಸೀದಿ ಜಂಕ್ಷನ್ನಿಂದ ಕರಂದಾಡಿ ಶಾಲೆಯವರೆಗೆ ದಂಪತಿಯ ಪಾರ್ಥಿವ ಶರೀರವನ್ನು ಅಂತಿಮ ಯಾತ್ರೆಯಲ್ಲಿ ತರಲಾಯಿತು. ಬಳಿಕ ಕರಂದಾಡಿ ಶಾಲಾ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು.ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಸೇರಿದಂತೆ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತುತಿ ಧಾರ್ಮಿಕ ಕ್ಷೇತ್ರದ ನೂರಾರು ಮಂದಿ ಯಾತ್ರೆಯುದ್ದಕ್ಕೂ ಪಾಲ್ಗೊಂಡು ಗೌರವ ಸಲ್ಲಿಸಿದ್ದರು.ಮೃತರ ಗೌರವಾರ್ಥ ಬೆಳಗ್ಗೆಯಿಂದ ಕಾಪು ಪೇಟೆ, ಕೊಂಬಗುಡ್ಡೆ, ಮಜೂರು ಪರಿಸರದಲ್ಲಿನ ಅಂಗಡಿ ಮುಗ್ಗಟ್ಟುಗಳು ಮುಚ್ಚಿ ಗೌರವ ಸೂಚಿಸಲಾಯಿತು.
ಕೆ.ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಕೌಟುಂಬಿಕ ಕಾರಣಕ್ಕಾಗಿ ಮಂಗಳವಾರ ಮಧ್ಯ ರಾತ್ರಿ ವೇಳೆ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಲೀಲಾಧರ ಶೆಟ್ಟಿ ದಂಪತಿ ಮಕ್ಕಳಿಲ್ಲದ ಕಾರಣಕ್ಕಾಗಿ ಸುಮಾರು 16 ವರ್ಷದ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡಿದ್ದರು. ಆಕೆ ಡಿ.12ರಂದು ರಾತ್ರಿ ಮನೆ ಬಿಟ್ಟು ಹೋಗಿದ್ದು, ಇದೇ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಮನನೊಂದ ದಂಪತಿ, ಮರಣ ಪತ್ರ ಬರೆದಿಟ್ಟು ರಾತ್ರಿ 11:20 ಗಂಟೆಯಿಂದ ಮಧ್ಯರಾತ್ರಿ 12.30ರ ಮಧ್ಯಾವಧಿಯಲ್ಲಿ ಮನೆಯ ಮಲಗುವ ಕೋಣೆಯಲ್ಲಿ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…