ಉಡುಪಿ:ಸಮಾಜ ಸೇವಕ, ಹಿರಿಯ ರಂಗ ಕಲಾವಿದ ಕೆ.ಲೀಲಾಧರ ಶೆಟ್ಟಿ ದಂಪತಿಯ ಅಕಾಲಿಕ ಮರಣದಿಂದ ಕಾಪು ತಾಲೂಕಿನ ಜನತೆ ಶೋಕ ಸಾಗರದಲ್ಲಿ ಮುಳುಗಿದೆ.
ಸಾವಿನ ಸುದ್ದಿ ತಿಳಿದು ನೂರಾರು ಮಂದಿ ಸಂಬಂಧಿಕರು, ಅಭಿಮಾನಿಗಳು, ಹಿತೈಷಿಗಳು ಮನೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ನಿನ್ನೆ ಸಂಜೆ ಕಾಪು ಪೊಲಿಪು ಜಾಮಿಯಾ ಮಸೀದಿ ಜಂಕ್ಷನ್ನಿಂದ ಕರಂದಾಡಿ ಶಾಲೆಯವರೆಗೆ ದಂಪತಿಯ ಪಾರ್ಥಿವ ಶರೀರವನ್ನು ಅಂತಿಮ ಯಾತ್ರೆಯಲ್ಲಿ ತರಲಾಯಿತು. ಬಳಿಕ ಕರಂದಾಡಿ ಶಾಲಾ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು.ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಸೇರಿದಂತೆ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತುತಿ ಧಾರ್ಮಿಕ ಕ್ಷೇತ್ರದ ನೂರಾರು ಮಂದಿ ಯಾತ್ರೆಯುದ್ದಕ್ಕೂ ಪಾಲ್ಗೊಂಡು ಗೌರವ ಸಲ್ಲಿಸಿದ್ದರು.ಮೃತರ ಗೌರವಾರ್ಥ ಬೆಳಗ್ಗೆಯಿಂದ ಕಾಪು ಪೇಟೆ, ಕೊಂಬಗುಡ್ಡೆ, ಮಜೂರು ಪರಿಸರದಲ್ಲಿನ ಅಂಗಡಿ ಮುಗ್ಗಟ್ಟುಗಳು ಮುಚ್ಚಿ ಗೌರವ ಸೂಚಿಸಲಾಯಿತು.
ಕೆ.ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಕೌಟುಂಬಿಕ ಕಾರಣಕ್ಕಾಗಿ ಮಂಗಳವಾರ ಮಧ್ಯ ರಾತ್ರಿ ವೇಳೆ ಮಜೂರು ಗ್ರಾಮದ ಕರಂದಾಡಿ ಎಂಬಲ್ಲಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಲೀಲಾಧರ ಶೆಟ್ಟಿ ದಂಪತಿ ಮಕ್ಕಳಿಲ್ಲದ ಕಾರಣಕ್ಕಾಗಿ ಸುಮಾರು 16 ವರ್ಷದ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡಿದ್ದರು. ಆಕೆ ಡಿ.12ರಂದು ರಾತ್ರಿ ಮನೆ ಬಿಟ್ಟು ಹೋಗಿದ್ದು, ಇದೇ ವಿಚಾರದಲ್ಲಿ ಮರ್ಯಾದೆಗೆ ಅಂಜಿ ಮನನೊಂದ ದಂಪತಿ, ಮರಣ ಪತ್ರ ಬರೆದಿಟ್ಟು ರಾತ್ರಿ 11:20 ಗಂಟೆಯಿಂದ ಮಧ್ಯರಾತ್ರಿ 12.30ರ ಮಧ್ಯಾವಧಿಯಲ್ಲಿ ಮನೆಯ ಮಲಗುವ ಕೋಣೆಯಲ್ಲಿ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…