ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ಕೂಲಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಕಳ ಮಿನಿ ವಿಧಾನ ಸೌಧದ ಮುಂದೆ ಧರಣಿ ನಡೆಸಲಾಯಿತು.
ಪ್ರತಿ 1000 ಬೀಡಿಗೆ ಹೊಸ ವೇತನ 400ರೂ.ನಂತೆ ನಿಗದಿಗೊಳಿಸಿ, ಸರಕಾರ ಆದೇಶ ಮಾಡಬೇಕು. ಬಡ ಬೀಡಿ ಕಾರ್ಮಿಕರಿಗೆ ಅನ್ಯಾಯ ಮಾಡುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗ್ರಾಚ್ಯುವಿಟಿ ಕಡ್ಡಾಯ ಪಾವತಿಸು ವಂತೆ ಮಾಡಬೇಕು. ವಾರ ಪೂರ್ತಿ ಕೆಲಸ ಅಥವಾ ಕೆಲಸ ಇಲ್ಲದ ದಿನ ವೇತನ ನೀಡಲು ಬೀಡಿ ಮಾಲೀಕರಿಗೆ ಸೂಚಿಸಬೇಕು ಎಂದು ಬೀಡಿಕಾರ್ಮಿಕರ ನೈಜ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿ, ಪರಿಹಾರ ಕಾಣಬೇಕು. ಕಾನೂನು ಬಾಹಿರ ಬೀಡಿ ಉತ್ಪಾದನೆಯನ್ನು ನಿಲ್ಲಿಸಿ, ಕಾರ್ಮಿಕ ಕಾನೂನುಗಳ ಕಠಣ ಜಾರಿಗೆ ಕ್ರಮ ವಹಿಸಬೇಕು. ಬೀಡಿ ಕಾರ್ಮಿಕರ ಆರೋಗ್ಯದ ಬಗ್ಗೆ ಸರಕಾರ ಜವಾಬ್ದಾರಿ ವಹಿಸಬೇಕು. ಬೀಡಿ ಕಾರ್ಮಿಕರಿಗೆ ಇ.ಎಸ್.ಐ. ಸೌಲಭ್ಯ ಒದಗಿಸಬೇಕು. ತಿಂಗಳಿಗೆ 6000ರೂ. ಪಿಂಚಣಿ ನೀಡ ಬೇಕು. ಬೀಡಿಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.ಬಳಿಕ ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಬೀಡಿ ಫೆಡರೇಶನ್ನ ಉಪಾಧ್ಯಕ್ಷ ಬಿ.ಎಂ.ಭಟ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ನ ಅಧ್ಯಕ್ಷ ಮಹಾಬಲ ವಡೆಯರಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್, ಮುಖಂಡರಾದ ಬಲ್ಕೀಸ್, ನಳಿನಿ, ಕಾರ್ಕಳ ಬೀಡಿ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್., ಕೋಶಾಧಿಕಾರಿ ಸುಮತಿ ಮೊದಲಾದವರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…