ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ಕೂಲಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಕಳ ಮಿನಿ ವಿಧಾನ ಸೌಧದ ಮುಂದೆ ಧರಣಿ ನಡೆಸಲಾಯಿತು.
ಪ್ರತಿ 1000 ಬೀಡಿಗೆ ಹೊಸ ವೇತನ 400ರೂ.ನಂತೆ ನಿಗದಿಗೊಳಿಸಿ, ಸರಕಾರ ಆದೇಶ ಮಾಡಬೇಕು. ಬಡ ಬೀಡಿ ಕಾರ್ಮಿಕರಿಗೆ ಅನ್ಯಾಯ ಮಾಡುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗ್ರಾಚ್ಯುವಿಟಿ ಕಡ್ಡಾಯ ಪಾವತಿಸು ವಂತೆ ಮಾಡಬೇಕು. ವಾರ ಪೂರ್ತಿ ಕೆಲಸ ಅಥವಾ ಕೆಲಸ ಇಲ್ಲದ ದಿನ ವೇತನ ನೀಡಲು ಬೀಡಿ ಮಾಲೀಕರಿಗೆ ಸೂಚಿಸಬೇಕು ಎಂದು ಬೀಡಿಕಾರ್ಮಿಕರ ನೈಜ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿ, ಪರಿಹಾರ ಕಾಣಬೇಕು. ಕಾನೂನು ಬಾಹಿರ ಬೀಡಿ ಉತ್ಪಾದನೆಯನ್ನು ನಿಲ್ಲಿಸಿ, ಕಾರ್ಮಿಕ ಕಾನೂನುಗಳ ಕಠಣ ಜಾರಿಗೆ ಕ್ರಮ ವಹಿಸಬೇಕು. ಬೀಡಿ ಕಾರ್ಮಿಕರ ಆರೋಗ್ಯದ ಬಗ್ಗೆ ಸರಕಾರ ಜವಾಬ್ದಾರಿ ವಹಿಸಬೇಕು. ಬೀಡಿ ಕಾರ್ಮಿಕರಿಗೆ ಇ.ಎಸ್.ಐ. ಸೌಲಭ್ಯ ಒದಗಿಸಬೇಕು. ತಿಂಗಳಿಗೆ 6000ರೂ. ಪಿಂಚಣಿ ನೀಡ ಬೇಕು. ಬೀಡಿಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.ಬಳಿಕ ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಬೀಡಿ ಫೆಡರೇಶನ್ನ ಉಪಾಧ್ಯಕ್ಷ ಬಿ.ಎಂ.ಭಟ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ನ ಅಧ್ಯಕ್ಷ ಮಹಾಬಲ ವಡೆಯರಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್, ಮುಖಂಡರಾದ ಬಲ್ಕೀಸ್, ನಳಿನಿ, ಕಾರ್ಕಳ ಬೀಡಿ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್., ಕೋಶಾಧಿಕಾರಿ ಸುಮತಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…