ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ಕೂಲಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಕಳ ಮಿನಿ ವಿಧಾನ ಸೌಧದ ಮುಂದೆ ಧರಣಿ ನಡೆಸಲಾಯಿತು.
ಪ್ರತಿ 1000 ಬೀಡಿಗೆ ಹೊಸ ವೇತನ 400ರೂ.ನಂತೆ ನಿಗದಿಗೊಳಿಸಿ, ಸರಕಾರ ಆದೇಶ ಮಾಡಬೇಕು. ಬಡ ಬೀಡಿ ಕಾರ್ಮಿಕರಿಗೆ ಅನ್ಯಾಯ ಮಾಡುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗ್ರಾಚ್ಯುವಿಟಿ ಕಡ್ಡಾಯ ಪಾವತಿಸು ವಂತೆ ಮಾಡಬೇಕು. ವಾರ ಪೂರ್ತಿ ಕೆಲಸ ಅಥವಾ ಕೆಲಸ ಇಲ್ಲದ ದಿನ ವೇತನ ನೀಡಲು ಬೀಡಿ ಮಾಲೀಕರಿಗೆ ಸೂಚಿಸಬೇಕು ಎಂದು ಬೀಡಿಕಾರ್ಮಿಕರ ನೈಜ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿ, ಪರಿಹಾರ ಕಾಣಬೇಕು. ಕಾನೂನು ಬಾಹಿರ ಬೀಡಿ ಉತ್ಪಾದನೆಯನ್ನು ನಿಲ್ಲಿಸಿ, ಕಾರ್ಮಿಕ ಕಾನೂನುಗಳ ಕಠಣ ಜಾರಿಗೆ ಕ್ರಮ ವಹಿಸಬೇಕು. ಬೀಡಿ ಕಾರ್ಮಿಕರ ಆರೋಗ್ಯದ ಬಗ್ಗೆ ಸರಕಾರ ಜವಾಬ್ದಾರಿ ವಹಿಸಬೇಕು. ಬೀಡಿ ಕಾರ್ಮಿಕರಿಗೆ ಇ.ಎಸ್.ಐ. ಸೌಲಭ್ಯ ಒದಗಿಸಬೇಕು. ತಿಂಗಳಿಗೆ 6000ರೂ. ಪಿಂಚಣಿ ನೀಡ ಬೇಕು. ಬೀಡಿಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.ಬಳಿಕ ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಬೀಡಿ ಫೆಡರೇಶನ್ನ ಉಪಾಧ್ಯಕ್ಷ ಬಿ.ಎಂ.ಭಟ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ನ ಅಧ್ಯಕ್ಷ ಮಹಾಬಲ ವಡೆಯರಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್, ಮುಖಂಡರಾದ ಬಲ್ಕೀಸ್, ನಳಿನಿ, ಕಾರ್ಕಳ ಬೀಡಿ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್., ಕೋಶಾಧಿಕಾರಿ ಸುಮತಿ ಮೊದಲಾದವರು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…