ಕರಾವಳಿ

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿಕನ್ನಡ ತುಳು ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್

ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗಣೇಶ ಅಮೀನ್ ಸಂಕಮಾರ್
ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ. ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ. ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ಡಿಸೆಂಬರ್ ೨೭ರ ಬುಧವಾರ ಮೂಲ್ಕಿ ಕಾರ್ನಾಡು ಸರಕಾರಿ ಪದವೀಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.


ಗಣೇಶ್ ಸಂಕಮಾರ್ ಅವರು ತುಳು ಕನ್ನಡ ಜನಪದ ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದಾರೆ. ಮೂವತ್ತೂರು ವರ್ಷಗಳ ಕಾಲ ಉಪನ್ಯಾಸಕರಾಗಿ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಡೀನ್ ಆಗಿ, ಕಾಟಿಪಳ್ಳ ನಾರಾಯಣಗುರು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದು, ಸಾವಿರದ ಸತ್ಯಗಳು, ನಿನಾದ, ಮಣ್ಣಿನೊಳಗಿನ ಅನ್ನ, ನುಡಿಸಿಂಗಾರ, ಬ್ರಹ್ಮ ಬಲಾಂಡಿ, ಧರ್ಮರಸು ಉಳ್ಳಾಯ, ಕರ್ಮ, ಅಗೋಳಿ ಮಂಜಣೆ ಸೇರಿದಂತೆ ಕನ್ನಡ ತುಳುವಿನಲ್ಲಿ ೧೮ ಕೃತಿಗಳನ್ನು ಪ್ರಕಟಿಸಿದ್ದಾರೆ. ಜಾನಪದ ಶಬ್ದ ಶಕ್ತಿ ವಿಷಯದಲ್ಲಿ ಸಂಶೋಧನೆಗಾಗಿ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ದೇಶ ವಿದೇಶಗಳಲ್ಲಿ ಐದುಸಾವಿರಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ. ಪತ್ರಿಕೆಗಳಲ್ಲಿ ಅಂಕಣ, ಬರಹಗಳು ಪ್ರಕಟವಾಗುತ್ತಲೇ ಇವೆ. ರೇಡಿಯೋ ದೂರದರ್ಶನಗಳಲ್ಲಿ ಸಾಹಿತ್ಯ ಸಂಸ್ಕೃತಿಗಳ ಬಗ್ಗೆ ಕಾರ‍್ಯಕ್ರಮಗಳನ್ನು ನೀಡುತ್ತ ಬಂದಿದ್ದಾರೆ. ಕೃಷಿಕರು, ಜನಪದ ಕ್ಷೇತ್ರಕ್ಕೂ ಸಾಕಷ್ಟು ಕೊಡುಗೆ ನೀಡಿದ್ದಾರೆ. ತುಳು ಸಾಹಿತ್ಯ ಅಕಾಡಮಿ ಸದಸ್ಯರಾಗಿ, ಪಾವಂಜೆಯಲ್ಲಿ ತುಳು ಅಧ್ಯಯನ ಕೇಂದ್ರದ ಸ್ಥಾಪನೆ ಹೀಗೆ ಕ್ರಿಯಾಶೀಲರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago