ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ, ವಿಟ್ಲ ಇದರ ನೇತೃತ್ವದಲ್ಲಿ ಜರಗಲಿರುವ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿ.ಕೆ. ಮೋನಪ್ಪ ಗುರುಸ್ವಾಮಿ ಇವರ ಗೌರವ ಉಪಸ್ಥಿತಿಯಲ್ಲಿ ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ ಜರುಗಿತು.
ಶ್ರೀ ಭಗವತೀ ದೇವಸ್ಥಾನ ವಿಟ್ಲ, ಶ್ರೀ ಧರ್ಮಶಾಸ್ತ ಭಕ್ತವೃಂದ ವಿಟ್ಲ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಸಂಯುಕ್ತ ಆಶ್ರಯದಲ್ಲಿ 2024 ಜನವರಿ 02 ಸೂರ್ಯೋದಯದಿಂದ ಜನವರಿ 03 ಸೂರ್ಯೋದಯದವರೆಗೆ ನಿರಂತರ ಭಜನಾ ಸೇವೆ ನಡೆಸುವುದೆಂದು ತೀರ್ಮಾನಿಸಲಾಯ್ತು.
ಈ ಸಭೆಯಲ್ಲಿ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಅಧ್ಯಕ್ಷರಾದ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಜತೆಕಾರ್ಯದರ್ಶಿ ರಾಮಕೃಷ್ಣ ಆಚಾರ್ಯ ಪಡಿಬಾಗಿಲು, ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ ಇವರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಮೋನಪ್ಪ ಗುರುಸ್ವಾಮಿಯವರ ಶಿಷ್ಯ ಅಯ್ಯಪ್ಪ ಸ್ವಾಮಿ ವೃತದಾರಿಗಳು ಉಪಸ್ಥಿತರಿದ್ದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…