ಪುತ್ತೂರು : ನಗರಸಭೆ ಉಪಚುನಾವಣೆ ಸಂದರ್ಭ ಮಹತ್ವದ ಬೆಳವಣಿಗೆ : ಬಿಜೆಪಿ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಡಾ | ಸುರೇಶ್ ಪುತ್ತೂರಾಯ..!
ವಿದಾನಸಭಾ ಚುನಾವಣೆ ವೇಳೆ ಅರುಣ್ ಪುತ್ತಿಲ ಜತೆ ಗುರುತಿಸಿಕೊಂಡಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆ ಹಾಗೂ ಆ ಬಳಿಕ ನಿನ್ನೆಯವರೆಗೆ ಪುತ್ತೂರಿನ 3ನೇ ರಾಜಕೀಯ ಶಕ್ತಿಯಾಗಿ ಕಾಣಿಸಿಕೊಳ್ಳುತ್ತಿರುವ ಪುತ್ತಿಲ ಪರಿವಾರದ ಭಾಗವಾಗಿದ್ದ ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ದಿಢೀರ್ ಪಾಳಯ ಬದಲಿಸಿದ್ದಾರೆ. ಪುತ್ತೂರು ನಗರ ಸಭೆಗೆ ತೆರವಾದ ಎರಡು ಸ್ಥಾನಗಳಿಗೆ ಡಿ 27 ರಂದು ಉಪ ಚುನಾವಣೆ ನಿಗದಿಯಾಗಿದ್ದು, ಆ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು ಇಂದು ನಾಮ ಪತ್ರ ಸಲ್ಲಿಸಿದರು. ವಾರ್ಡ್ 1 ಕ್ಕೆ ಸುನೀತಾ ಹಾಗೂ ವಾರ್ಡ 11ಕ್ಕೆ ರಮೇಶ್ ರೈಯವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ಇಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಅಭ್ಯರ್ಥಿಗಳು ಹಾಗೂ ಬಿಜೆಪಿ ಮುಖಂಡರು ಪ್ರಾರ್ಥನೆ ಸಲ್ಲಿಸಿದರು . ಈ ವೇಳೆ ಅಲ್ಲಿಗೆ ಆಗಮಿಸಿದ ಡಾ| ಪುತ್ತೂರಾಯರು ಇಬ್ಬರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಡಾ ಸುರೇಶ್ ಪುತ್ತೂರು ದಿಢೀರ್ ಪಾಳಯ ಬದಲಾಯಿಸಲು ಕಾರಣವೇನು ಎಂದು ತಿಳಿದು ಬಂದಿಲ್ಲ.
ಈ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅದ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹಿರಿಯ ಬಿಜೆಪಿ ಮುಖಮಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ದಿನೇಶ್ ಜೈನ್ , ರಾಮದಾಸ ಹಾರಾಡಿ ಮುಂತಾದವರು ಇದ್ದರು,ಬಳಿಕ ಬಿಜೆಪಿ ಅಭ್ಯರ್ತಿಗಳು ಹಾಗೂ ಬಿಜೆಪಿ ಮುಖಂಡರು ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…