ಪುತ್ತೂರು : ನಗರಸಭೆ ಉಪಚುನಾವಣೆ ಸಂದರ್ಭ ಮಹತ್ವದ ಬೆಳವಣಿಗೆ : ಬಿಜೆಪಿ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಡಾ | ಸುರೇಶ್ ಪುತ್ತೂರಾಯ..!
ವಿದಾನಸಭಾ ಚುನಾವಣೆ ವೇಳೆ ಅರುಣ್ ಪುತ್ತಿಲ ಜತೆ ಗುರುತಿಸಿಕೊಂಡಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆ ಹಾಗೂ ಆ ಬಳಿಕ ನಿನ್ನೆಯವರೆಗೆ ಪುತ್ತೂರಿನ 3ನೇ ರಾಜಕೀಯ ಶಕ್ತಿಯಾಗಿ ಕಾಣಿಸಿಕೊಳ್ಳುತ್ತಿರುವ ಪುತ್ತಿಲ ಪರಿವಾರದ ಭಾಗವಾಗಿದ್ದ ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ದಿಢೀರ್ ಪಾಳಯ ಬದಲಿಸಿದ್ದಾರೆ. ಪುತ್ತೂರು ನಗರ ಸಭೆಗೆ ತೆರವಾದ ಎರಡು ಸ್ಥಾನಗಳಿಗೆ ಡಿ 27 ರಂದು ಉಪ ಚುನಾವಣೆ ನಿಗದಿಯಾಗಿದ್ದು, ಆ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು ಇಂದು ನಾಮ ಪತ್ರ ಸಲ್ಲಿಸಿದರು. ವಾರ್ಡ್ 1 ಕ್ಕೆ ಸುನೀತಾ ಹಾಗೂ ವಾರ್ಡ 11ಕ್ಕೆ ರಮೇಶ್ ರೈಯವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮೊದಲು ಇಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಅಭ್ಯರ್ಥಿಗಳು ಹಾಗೂ ಬಿಜೆಪಿ ಮುಖಂಡರು ಪ್ರಾರ್ಥನೆ ಸಲ್ಲಿಸಿದರು . ಈ ವೇಳೆ ಅಲ್ಲಿಗೆ ಆಗಮಿಸಿದ ಡಾ| ಪುತ್ತೂರಾಯರು ಇಬ್ಬರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಡಾ ಸುರೇಶ್ ಪುತ್ತೂರು ದಿಢೀರ್ ಪಾಳಯ ಬದಲಾಯಿಸಲು ಕಾರಣವೇನು ಎಂದು ತಿಳಿದು ಬಂದಿಲ್ಲ.
ಈ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅದ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹಿರಿಯ ಬಿಜೆಪಿ ಮುಖಮಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ದಿನೇಶ್ ಜೈನ್ , ರಾಮದಾಸ ಹಾರಾಡಿ ಮುಂತಾದವರು ಇದ್ದರು,ಬಳಿಕ ಬಿಜೆಪಿ ಅಭ್ಯರ್ತಿಗಳು ಹಾಗೂ ಬಿಜೆಪಿ ಮುಖಂಡರು ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…