ಮೂಡುಬಿದಿರೆ ಒಂಟಿಕಟ್ಟೆ ಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ ಕೋಟಿ-ಚೆನ್ನಯ 21ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳೋತ್ಸವ ಡಿಸೆಂಬರ್ 17ರಂದು ಪೂರ್ವಾಹ್ನ ಗಂಟೆ 7.00ರಿಂದ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಎ. ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಓಡಿಸಿದವರಿಗೆ ಕಾಲು ಪವನು ಚಿನ್ನದ ಬಹುಮಾನ ಲಭಿಸಲಿದೆ. ವಿಜೇತ ಕೋಣಗಳ ಸಹಾಯಕ ತಂಡಕ್ಕೆ ರೂ. 1000 ನಗದು ಬಹುಮಾನ ಲಭಿಸಲಿದೆ. ಪ್ರಧಾನ ತೀರ್ಪುಗಾರರಾಗಿ ವಿಶ್ರಾಂತ ಪ್ರಾಂಶುಪಾಲ ಕೆ. ಗುಣಪಾಲ ಕಡಂಬ, ವೀಕ್ಷಕ ವಿವರಣೆ ಮತ್ತು ತೀರ್ಪುಗಾರರಾಗಿ ರಾಜೀವ ಶೆಟ್ಟಿ ಎಡ್ತೂರು, ರವೀಂದ್ರ ಕುಮಾರ್ ಕುಕ್ಕುಂದೂರು, ನವೀನ್ಚಂದ್ರ ಅಂಬೂರಿ, ವಿಜಯಕುಮಾರ್ ಕಂಗಿನ ಮನೆ, ಸುಧಾಕರ ಶೆಟ್ಟಿ ಮುಗ್ರೋಡಿ, ಸತೀಶ್ ಹೊಸ್ಮಾರು, ವಿದ್ಯಾಧರ ಜೈನ್ ರೆಂಜಾಳ ಸಹಕರಿಸಲಿದ್ದಾರೆ. ವೀಡಿಯೋ ತೀರ್ಪುಗಾರರಾಗಿ ಬಂಟ್ವಾಳ ಮಹಾಕಾಳಿಬೆಟ್ಟು ಸೀತಾರಾಮ್ ಶೆಟ್ಟಿ, ಮೂಡುಬಿದಿರೆ ಕಂಬಳ ಸಮಿತಿ ಉಪಾಧ್ಯಕ್ಷ ಸುರೇಶ್ ಕೆ. ಪೂಜಾರಿ, ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ, ಸಹಕರಿಸಲಿ ದ್ದಾರೆ. ಸ್ಕೈವ್ಯೂ ಕಾರ್ಕಳ ವತಿಯಿಂದ ಲೇಸರ್ ಬೀಂ ನೆಟ್ವರ್ಕ್ ಸಿಸ್ಟಮ್ ಮತ್ತು ಟೈಮರ್ ಮೂಲಕ ದಾಖಲೀಕರಣ ನಡೆಯಲಿದೆ. ಕೋಣಗಳನ್ನು ಗದ್ದೆಗೆ ಇಳಿಸಲು ನೇಗಿಲು ಕಿರಿಯ ವಿಭಾಗಕ್ಕೆ ಪೂರ್ವಾಹ್ನ ಗಂಟೆ 8.00, ಹಗ್ಗ ಕಿರಿಯ ಮಧ್ಯಾಹ್ನ ಗಂಟೆ 11.00, ನೇಗಿಲು ಹಿರಿಯ ಮಧ್ಯಾಹ್ನ ಗಂಟೆ 12.00, ಹಗ್ಗ ಹಿರಿಯ ಮಧ್ಯಾಹ್ನ ಗಂಟೆ 2.00, ಕನೆಹಲಗೆ ಮತ್ತು ಅಡ್ಡಹಲಗೆ ಅಪರಾಹ್ನ ಗಂಟೆ 3.00ಕ್ಕೆ ಸಮಯ ನಿಗದಿ ಪಡಿಸಲಾಗಿದೆ.
ಕಳೆದ ಬಾರಿ 276ಜೊತೆ ಕೋಣಗಳು ಮೂಡುಬಿದಿರೆ ಕಂಬಳ ಕೂಟದಲ್ಲಿ ಭಾಗವಹಿಸಿದ್ದು, ಈ ಬಾರಿ ಮತ್ತಷ್ಟು ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ.ಜಿಲ್ಲಾ ಕಂಬಳ ಸಮಿತಿಯು ಜಾರಿಗೊಳಿಸಿದ ಎಲ್ಲಾ ನಿಯಮ ಗಳನ್ನು ಈ ಕಂಬಳದಲ್ಲಿ ಪಾಲಿಸಲು ತೀರ್ಮಾನಿಸಲಾಗಿದೆ. ಅಹಿಂಸಾತ್ಮಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಿಗಧಿತ ಕಾಲಮಿತಿ ಯೊಳಗೆ ಕಂಬಳ ಕೂಟ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮೂಡುಬಿದಿರೆ ಕಂಬಳ ಪ್ರಧಾನ ಕಾರ್ಯದರ್ಶಿ ಕೆ. ಗುಣಪಾಲ ಕಡಂಬ, ಕಾರ್ಯದರ್ಶಿ ರಂಜಿತ್ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕೆ. ಪೂಜಾರಿ, ಪ್ರಮುಖರಾದ ಜಗದೀಶ್ ಅಧಿಕಾರಿ, ಈಶ್ವರ ಕಟೀಲ್ ಉಪಸ್ಥಿತರಿದ್ದರು
ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ ಕಂಬಳೋತ್ಸವ ಈ ವರ್ಷದ ಯೋಜನೆಯಾಗಿ ಸುಮಾರು 50ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ಹಾಗೂ ಸ್ವಾಗತ ದ್ವಾರ ನಿರ್ಮಿಸಲಾಗುತ್ತಿದೆ. 2023ರ ಅವಧಿಯಲ್ಲಿ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಮಂಜೂರುಗೊಂಡ ಅನುದಾನವನ್ನು ಬಳಸಿಕೊಂಡು ರಕ್ಷಣಾತ್ಮಕ ಮತ್ತು ಕಲಾತ್ಮಕ ಆವರಣ ಗೋಡೆ ನಿರ್ಮಾಣಕ್ಕೆ ಕಂಬಳ ಸಮಿತಿ ಕಾರ್ಯಯೋಜನೆ ರಚಿಸಿದೆ. ಆವರಣ ಗೋಡೆಯಲ್ಲಿ ನಿರ್ಮಿಸಲುದ್ದೇಶಿಸಿರುವ ಆಕರ್ಷಣೀಯ ಸ್ವಾಗತ ಗೋಪುರಕ್ಕೆ ದೇಶದ ಗಡಿಯಲ್ಲಿ ಉಗ್ರರ ಧಾಳಿಗೆ ಪ್ರಾಣತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ನಾಮಕರಣಗೊಳಿಸಲು ಸಮಿತಿ ನಿರ್ಧರಿಸಿದೆ ಎಂದು ಕಂಬಳ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು ತಿಳಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…