ಜನ ಮನದ ನಾಡಿ ಮಿಡಿತ

Advertisement

ಡಿ. 20 ರಿಂದ 22ರವರೆಗೆ ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರದ ರಜತ ಮಹೋತ್ಸವ

ಉಡುಪಿ: ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರ ಹಾಗೂ ಡಿ.ಜಿ.ಎಂ.ಬೇತೆಲ್ ಚರ್ಚ್ ಯೇಸುಪುರ ಇದರ ರಜತ ಮಹೋತ್ಸವ ಸಮಾರಂಭ ಇದೇ ಬರುವ ಡಿಸೆಂಬರ್ 20, 21ಮತ್ತು 22ರಂದು ಮೂರು ದಿನಗಳ ಕಾಲ ಶಂಕರಪುರದ ಕ್ಯಾನರಿ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ವಿಶ್ವಾಸದಮನೆಯ ಸ್ಥಾಪಕ ಹಾಗೂ ಅಧ್ಯಕ್ಷ ಸುನೀಲ್ ಜಾನ್ ಡಿಸೋಜ ಹೇಳಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಾಸದಮನೆ ಕಳೆದ 25 ವರ್ಷಗಳಿಂದ ಸಾರ್ಥಕ ಸೇವೆಯನ್ನು ಮಾಡಿಕೊಂಡು ಬಂದಿದೆ. ಅನಾಥರು, ನಿರ್ಗತಿಕರು, ಮಾನಸಿಕ ಅಸ್ವಸ್ಥರಿಗೆ ಉಚಿತ ವಸತಿ, ಊಟ, ಬಟ್ಟೆಬರೆ ಹಾಗೂ ವೈದ್ಯಕೀಯ ಶುಶ್ರೂಷೆಗಳನ್ನು ನೀಡುತ್ತಿದೆ ಎಂದರು.
ಡಿ. 20 ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶ್‌ಪಾಲ್ ಎ.ಸುವರ್ಣ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ರೋಶನ್ ಬೆಳ್ಮಣ್, ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ, ರವಿ ಕಟಪಾಡಿ, ಆಸಿಫ್ ಆಪತ್ಭಾಂದವ, ಸೂರಿ ಶೆಟ್ಟಿ ಕಾಪು, ವಿನಯ್ ಸಾಸ್ತಾನ, ತನುಲಾ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!