ಜನ ಮನದ ನಾಡಿ ಮಿಡಿತ

Advertisement

ಡಿ. 20 ರಿಂದ 22ರವರೆಗೆ ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರದ ರಜತ ಮಹೋತ್ಸವ

ಉಡುಪಿ: ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರ ಹಾಗೂ ಡಿ.ಜಿ.ಎಂ.ಬೇತೆಲ್ ಚರ್ಚ್ ಯೇಸುಪುರ ಇದರ ರಜತ ಮಹೋತ್ಸವ ಸಮಾರಂಭ ಇದೇ ಬರುವ ಡಿಸೆಂಬರ್ 20, 21ಮತ್ತು 22ರಂದು ಮೂರು ದಿನಗಳ ಕಾಲ ಶಂಕರಪುರದ ಕ್ಯಾನರಿ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ವಿಶ್ವಾಸದಮನೆಯ ಸ್ಥಾಪಕ ಹಾಗೂ ಅಧ್ಯಕ್ಷ ಸುನೀಲ್ ಜಾನ್ ಡಿಸೋಜ ಹೇಳಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಾಸದಮನೆ ಕಳೆದ 25 ವರ್ಷಗಳಿಂದ ಸಾರ್ಥಕ ಸೇವೆಯನ್ನು ಮಾಡಿಕೊಂಡು ಬಂದಿದೆ. ಅನಾಥರು, ನಿರ್ಗತಿಕರು, ಮಾನಸಿಕ ಅಸ್ವಸ್ಥರಿಗೆ ಉಚಿತ ವಸತಿ, ಊಟ, ಬಟ್ಟೆಬರೆ ಹಾಗೂ ವೈದ್ಯಕೀಯ ಶುಶ್ರೂಷೆಗಳನ್ನು ನೀಡುತ್ತಿದೆ ಎಂದರು.
ಡಿ. 20 ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶ್‌ಪಾಲ್ ಎ.ಸುವರ್ಣ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ರೋಶನ್ ಬೆಳ್ಮಣ್, ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ, ರವಿ ಕಟಪಾಡಿ, ಆಸಿಫ್ ಆಪತ್ಭಾಂದವ, ಸೂರಿ ಶೆಟ್ಟಿ ಕಾಪು, ವಿನಯ್ ಸಾಸ್ತಾನ, ತನುಲಾ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!