ಉಡುಪಿ: ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರ ಹಾಗೂ ಡಿ.ಜಿ.ಎಂ.ಬೇತೆಲ್ ಚರ್ಚ್ ಯೇಸುಪುರ ಇದರ ರಜತ ಮಹೋತ್ಸವ ಸಮಾರಂಭ ಇದೇ ಬರುವ ಡಿಸೆಂಬರ್ 20, 21ಮತ್ತು 22ರಂದು ಮೂರು ದಿನಗಳ ಕಾಲ ಶಂಕರಪುರದ ಕ್ಯಾನರಿ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ವಿಶ್ವಾಸದಮನೆಯ ಸ್ಥಾಪಕ ಹಾಗೂ ಅಧ್ಯಕ್ಷ ಸುನೀಲ್ ಜಾನ್ ಡಿಸೋಜ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಾಸದಮನೆ ಕಳೆದ 25 ವರ್ಷಗಳಿಂದ ಸಾರ್ಥಕ ಸೇವೆಯನ್ನು ಮಾಡಿಕೊಂಡು ಬಂದಿದೆ. ಅನಾಥರು, ನಿರ್ಗತಿಕರು, ಮಾನಸಿಕ ಅಸ್ವಸ್ಥರಿಗೆ ಉಚಿತ ವಸತಿ, ಊಟ, ಬಟ್ಟೆಬರೆ ಹಾಗೂ ವೈದ್ಯಕೀಯ ಶುಶ್ರೂಷೆಗಳನ್ನು ನೀಡುತ್ತಿದೆ ಎಂದರು.
ಡಿ. 20 ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶ್ಪಾಲ್ ಎ.ಸುವರ್ಣ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ರೋಶನ್ ಬೆಳ್ಮಣ್, ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ, ರವಿ ಕಟಪಾಡಿ, ಆಸಿಫ್ ಆಪತ್ಭಾಂದವ, ಸೂರಿ ಶೆಟ್ಟಿ ಕಾಪು, ವಿನಯ್ ಸಾಸ್ತಾನ, ತನುಲಾ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…