ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ ಸಮೀಪದ ತೋಕೂರು ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮನವಿ ಪತ್ರ ಬಿಡುಗಡೆ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮನವಿ ಪತ್ರ ಬಿಡುಗಡೆ ಸಮಾರಂಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ತುಳುನಾಡು ದೇವ-ದೈವ ವಸ್ಥಾನಗಳ ನಾಡಾಗಿದ್ದು ಜೀರ್ಣೋದ್ದಾರದ ಮೂಲಕ ಸುಖ, ಶಾಂತಿ ನೆಮ್ಮದಿ ಹಾಗೂ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸುಬ್ರಹ್ಮಣ್ಯರಾವ್ ನಂದಗೋಕುಲ ಪಡುಬಿದ್ರೆ, ವೆಂಕಟೇಶ ಭಟ್ ಚೆನ್ನೈ, ಉಮೇಶ್ ಶೆಟ್ಟಿ ತೋಕೂರುಗುತ್ತು,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದಿಲೀಪ್ ರೋಡ್ಕರ್, ಟಿ ರಾಮಕೃಷ್ಣ ಶೆಟ್ಟಿ ತೋಕೂರುಗುತ್ತು, ಪುರುಷೋತ್ತಮ ಶೆಟ್ಟಿ ಬೈಲಗುತ್ತು ಪಂಜ, ಟಿ.ಎಸ್ ಪ್ರಭಾಕರರಾವ್ ಕಂಬಳಬೆಟ್ಟು,ರಾಜೇಶ್ ಸಾಲ್ಯಾನ್, ದೊಡ್ಡಮನೆ,ತೋಕೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಆಚಾರ್ಯ , ಗೌರವಾಧ್ಯಕ್ಷ ಹರಿದಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಸಮಿತಿಯ ಹೇಮನಾಥ ಅಮೀನ್ ನಿರೂಪಿಸಿದರು.ಬಳಿಕ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು ಸಂಪತ್ ದೇವಾಡಿಗ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!