ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಮದ್ದೇರಿ ದೈವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಮನವಿ ಪತ್ರ ಬಿಡುಗಡೆ ಸಮಾರಂಭ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ತುಳುನಾಡು ದೇವ-ದೈವ ವಸ್ಥಾನಗಳ ನಾಡಾಗಿದ್ದು ಜೀರ್ಣೋದ್ದಾರದ ಮೂಲಕ ಸುಖ, ಶಾಂತಿ ನೆಮ್ಮದಿ ಹಾಗೂ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸುಬ್ರಹ್ಮಣ್ಯರಾವ್ ನಂದಗೋಕುಲ ಪಡುಬಿದ್ರೆ, ವೆಂಕಟೇಶ ಭಟ್ ಚೆನ್ನೈ, ಉಮೇಶ್ ಶೆಟ್ಟಿ ತೋಕೂರುಗುತ್ತು,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದಿಲೀಪ್ ರೋಡ್ಕರ್, ಟಿ ರಾಮಕೃಷ್ಣ ಶೆಟ್ಟಿ ತೋಕೂರುಗುತ್ತು, ಪುರುಷೋತ್ತಮ ಶೆಟ್ಟಿ ಬೈಲಗುತ್ತು ಪಂಜ, ಟಿ.ಎಸ್ ಪ್ರಭಾಕರರಾವ್ ಕಂಬಳಬೆಟ್ಟು,ರಾಜೇಶ್ ಸಾಲ್ಯಾನ್, ದೊಡ್ಡಮನೆ,ತೋಕೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಆಚಾರ್ಯ , ಗೌರವಾಧ್ಯಕ್ಷ ಹರಿದಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಸಮಿತಿಯ ಹೇಮನಾಥ ಅಮೀನ್ ನಿರೂಪಿಸಿದರು.ಬಳಿಕ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು ಸಂಪತ್ ದೇವಾಡಿಗ ಧನ್ಯವಾದ ಅರ್ಪಿಸಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…