ರಾಜ್ಯ

ಆಳ್ವಾಸ್ ವಿರಾಸತ್ 2023 – ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ – ವರದಿ

ದಕ್ಷಿಣ ಕನ್ನಡ : ಶಿಕ್ಷಣ ಕಾಶಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಟ್ಟು ನಾಲ್ಕು ದಿನಗಳ ‘ಆಳ್ವಾಸ್ ವಿರಾಸತ್‌-2023 ರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮ ಗುರುವಾರ ಆರಂಭಗೊಂಡಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಪಾಲರು ಉದ್ಘಾಟಿಸಿದರು, ‘ವಸುಧೈವ ಕುಟುಂಬಕಂ ಪರಿಕಲ್ಪನೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಸಾಕಾರಗೊಳ್ಳುತ್ತಿರುವುದಕ್ಕೆ ತಮ್ಮ ಉದ್ಘಾಟನಾ ಭಾಷಣದಲ್ಲಿ ಸಂತಸ ವ್ಯಕ್ತಪಡಿಸಿದರು .
ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ‘ಆಳ್ವಾಸ್‌ನಲ್ಲಿ ಜ್ಞಾನದ ಜಾತ್ರೆ ಮತ್ತು ಯಾತ್ರೆ ನಡೆಯುತ್ತಿದೆ. ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರದ ಶಿಕ್ಷಣ ಆಳ್ವಾಸ್ ನೀಡುತ್ತಿದೆ ಜ್ಞಾನದ ಜೊತೆಗೆ ‌ವಿಜ್ಞಾನ ಬೆಳೆಯಬೇಕು. ಇವೆಲ್ಲವೂ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ದೊರೆಯುತ್ತಿರುವುದಕ್ಕೆ ಶಿಕ್ಷಣ ಸಂಸ್ಥೆಯನ್ನು ಅಭಿನಂದಿಸಿದರು.

ಆಳ್ವಾಸ್ ವಿರಾಸತ್ ಕಾರ್ಯಕ್ರಮಕ್ಕೆ ಎಲ್ಲರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾಕ್ಟರ್ ಮೋಹನ ಆಳ್ವ ಸ್ವಾಗತಿಸಿದರು, ಹಾಗೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ವಿನಂತಿಸಿದರು.

ಆಳ್ವಾಸ್‌ ವಿರಾಸತ್‌ನ ಎರಡನೇ ದಿನವೂ ಜನ ಸಾಗರವೇ ಹರಿದು ಬಂದಿದೆ.  ಬೆಳಗ್ಗಿನಿಂದಲೇ ಮಕ್ಕಳು ಹಿರಿಯರು ಸೇರಿದಂತೆ ಲಕ್ಷಾಂತರ ಮಂದಿ ಆಗಮಿಸುತ್ತಲೇ ಇದ್ದರು.

ಸಂಜೆಯ ಸಂಗೀತ ಕಾರ್ಯಕ್ರಮದ ವೇಳೆ ಜನ ಸಾಗರವೇ ಹರಿದು ಬಂದಿದೆ. ಬೆನ್ನಿ ದಯಾಳ್‌ ಸಂಗೀತ ಕಾರ್ಯಕ್ರಮದ ಸಂಗೀತ ಕಾರ್ಯಕ್ರಮಕ್ಕೆ ಒಂದು ಗಂಟೆ ಮೊದಲೇ ಜನ ಬಂದು ಕುರ್ಚಿ ಅಲಂಕರಿಸಿದ್ದರು. ಸುಮಾರು 60 ಸಾವಿರ ಮಂದಿ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣದ ವೇದಿಕೆ ಸಂಪೂರ್ಣ ಭರ್ತಿಯಾಗಿತ್ತು. ಆಹಾರ ಮೇಳ, ಪ್ರದರ್ಶನ ಮಳಿಗೆಗಳು, ಕೃಷಿ ಮೇಳ ಸೇರಿದಂತೆ ಎಲ್ಲ ಮೇಳಗಳೂ ಜನರಿಂದ ತುಂಬಿತ್ತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದಲೂ ವಿದ್ಯಾರ್ಥಿಗಳು ಆಗಮಿಸಿದ್ದರು. ಊರ ಪರವೂರ ನಾಗರಿಕರು ಕಾರ್ಯಕ್ರಮದಲ್ಲಿ ಕುಟುಂಬ ಸಹಿತ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಆಳ್ವಾಸ್ ವಿರಾಸತ್‌ನ ಮೂರನೇ ದಿನವಾದ ಶನಿವಾರ ಸಂಜೆ 6ರಿಂದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌ ಅವರಿಂದ ಭಾವ ಲಹರಿ ಸಂಗೀತ ಕಾರ್ಯಕ್ರಮ ನಡೆಯಿತು. ಬಳಿಕ ರಾತ್ರಿ 8 ರಿಂದ ಆಳ್ವಾಸ್‌ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು.

ವಿರಾಸತ್‌ನ ಮೂರನೇ ದಿನವಾದ ಶನಿವಾರವೂ ಸಪ್ತ ಮೇಳ ಗಮನ ಸೆಳೆಯಿತು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಆವರಣದಲ್ಲಿ ಆಯೋಜಿಸಲಾದ ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿಗಳ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನವನ್ನು ಸಾವಿರಾರು ಮಂದಿ ವೀಕ್ಷಿಸಿದರು.

ಡಿ. 17ರಂದು ಸಂಜೆ 5.15ರಿಂದ ಆಳ್ವಾಸ್‌ ವಿರಾಸತ್‌ 2023 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಡಾ| ಮೈಸೂರು ಮಂಜುನಾಥ್‌, ಡಾ| ಪ್ರವೀಣ್‌ ಗೋಡ್ಖಿಂಡಿ ಮತ್ತು ವಿಜಯ ಪ್ರಕಾಶ್‌ ಅವರಿಗೆ ವಿರಾಸತ್‌ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 6.30ರಿಂದ 7.15ರ ವರೆಗೆ ನಡೆಯುವ ತಾಳ-ವಾದ್ಯ-ಸಂಗೀತದಲ್ಲಿ ಡಾ| ಮೈಸೂರು ಮಂಜುನಾಥ್‌, ಡಾ| ಪ್ರವೀಣ್‌ ಗೋಡ್ಖಿಂಡಿ, ವಿಜಯ ಪ್ರಕಾಶ್‌ ಮತ್ತು ಬಳಗ ಮೋಡಿ ಮಾಡಲಿದೆ. ಆದೇ ರೀತಿ, ಸಂಜೆ 7.30 ರಿಂದ 9.30ರ ವರೆಗೆ ಖ್ಯಾತ ಚಲನಚಿತ್ರ ಗಾಯಕ ವಿಜಯ ಪ್ರಕಾಶ್‌ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ. ರಾತ್ರಿ 9.30 ರಿಂದ 10.15ರ ವರೆಗೆ ಆಳ್ವಾಸ್‌ ಸಾಂಸ್ಕೃತಿಕ ವೈಭವ ಜರಗಲಿದೆ.
ಆಳ್ವಾಸ್‌ ವಿರಾಸತ್‌ಗೆ ಪ್ರತೀದಿನ ಸಾವಿರಾರು ಮಂದಿ ಆಗಮಿಸಿದ್ದರೂ, ಕ್ಯಾಂಪಸ್‌ನ ಸುಮಾರು 200 ಎಕರೆ ಪ್ರದೇಶದ , ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ . ಟ್ರಾಲಿ, ಟ್ರಾಕ್ಟರ್‌, ಲಾರಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದು, ಅಲ್ಲಲ್ಲಿ ಕಸದ ಡಬ್ಬಿ ಇಡಲಾಗಿದೆ. ಸ್ವಚ್ಛತೆಯ ನಿಟ್ಟಿನಲ್ಲಿ ಬೆಳಗ್ಗೆ 8.30ರಿಂದ ರಾತ್ರಿ 11.30ರ ವರೆಗೆ ಸುಮಾರು ನೂರಕ್ಕೂ ಅಧಿಕ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಹಾರ ಮೇಳದಲ್ಲಿ ಉಪಯೋಗಿಸುವ ನೀರಿನ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸಲಾಗಿದೆ . ಹಸಿ ಕಸ, ಒಣ ಕಸ ಮತ್ತು ಪ್ಲಾಸ್ಟಿಕ್‌ ಅನ್ನು ಪ್ರತ್ಯೇಕವಾಗಿ ಬೇರ್ಪಡಿಸಿ ಸಂಸ್ಕರಣೆ ಮಾಡಲಾಗುತ್ತದೆ. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಲಾಗಿದೆ.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ, ವಿರಾಸತ್ ಸಂಘಟಕ ಡಾಕ್ಟರ್ ಮೋಹನ ಆಳ್ವ ಮಾತನಾಡಿ 28 ವರ್ಷಗಳ ಹಿಂದೆ ಆರಂಭಿಸಿದ ವಿರಾಸತ್ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಒಂದು ಜಿಲ್ಲೆಗೆ ಸೀಮಿತವಾಗಿದ್ದ ಈ ಕಾರ್ಯಕ್ರಮ ಜಾಗತಿಕ ಮಟ್ಟಕ್ಕೆ ವಿಸ್ತರಿಸಿರುವುದು ಮನಸ್ಸಿಗೆ ಸಂತೋಷ ನೀಡಿದೆ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

17 hours ago

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…

17 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…

18 hours ago

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…

18 hours ago

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…

22 hours ago

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…

22 hours ago