ಜನ ಮನದ ನಾಡಿ ಮಿಡಿತ

Advertisement

ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಕೇಸ್: ಸಾಕು ಮಗಳ ಕರೆದೊಯ್ದ ನಾಲ್ವರ ಬಂಧನ..!!

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. 

ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ‌ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು‌ ನಾಪತ್ತೆ‌ ಪ್ರಕರಣಗಳು ದಾಖಲಾಗಿದ್ದವು. ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಪಿ ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.


Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!