ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು ನಾಪತ್ತೆ ಪ್ರಕರಣಗಳು ದಾಖಲಾಗಿದ್ದವು. ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಪಿ ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…