ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನಿವೃತ್ತ ಉಪನ್ಯಾಸಕ ಸುಬ್ಬರಾವ್ ನಿಧನ

ಮುಲ್ಕಿ: ಇಲ್ಲಿಗೆ ಸಮೀಪದ ಶಿಮಂತೂರು ನಿವಾಸಿ ನಿವೃತ್ತ ಉಪನ್ಯಾಸಕ ಸುಬ್ಬರಾವ್ (93) ಮಂಗಳವಾರ ಸಂಜೆ ನಿಧನರಾದರು ಅವರು 2 ಪುತ್ರರು ಹಾಗೂ 3 ಪುತ್ರಿಯರನ್ನ ಅಗಲಿದ್ದಾರೆ.


ಆರಂಭಿಕ ಶೈಕ್ಷಣಿಕ ಹಂತದಲ್ಲಿ ಅವರು 5 ನೆಯ ತರಗತಿಯವರೆಗೆ ಮಾತ್ರ ಶಿಕ್ಷಣ ಪಡೆದು ಬಳಿಕ ಎಸ್ಎಸ್ಎಲ್ಸಿ ,ಪಿಯುಸಿ, ಬಿಎ, ಬಿಎಡ್, ಎಂಎ ಶಿಕ್ಷಣವನ್ನು ಖಾಸಗಿಯಾಗಿ ತೇರ್ಗಡೆಯಾದರು.
ಬಳಿಕ ಪ್ರೌಢಶಾಲಾ ಶಿಕ್ಷಕರಾಗಿ ಬಳ್ಳಾರಿ, ಶೃಂಗೇರಿ, ಹಾಸನ, ಕೆಂಚನಹಳ್ಳಿ,ಕನ್ಯಾನದಲ್ಲಿ ಸೇವೆ ಸಲ್ಲಿಸಿದ್ದ ಅವರು ಉಪನ್ಯಾಸಕರಾಗಿ ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುಮಾರು ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದರು.
ಯಕ್ಷಗಾನ ತಾಳಮದ್ದಳೆ ಅರ್ಥದಾರಿಯಾಗಿ, ಪುರಾಣ ಪ್ರವಚನಕಾರರಾಗಿ, ಕನ್ನಡ ಮತ್ತು ಸಂಸ್ಕೃತ ವಿದ್ವಾಂಸರಾಗಿ ,ಅಧ್ಯಾಪಕರಾಗಿ, ಕೃಷಿಕರಾಗಿ , ಪುರೋಹಿತರಾಗಿ ಜನಾನುರಾಗಿಯಾಗಿದ್ದರು ಅವರ ಸಾಧನೆಗೆ ಕಿನ್ನಿಗೋಳಿಯ ಯಕ್ಷಲಹರಿ ಸಂಸ್ಥೆ ವತಿಯಿಂದ 1998 ರಲ್ಲಿ ಗೌರವಿಸಲ್ಪಟ್ಟಿದ್ದರು.ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ,ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಶಿಮಂತೂರು ಶ್ರೀ ಆದಿಯ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ, ಮಾಜೀ ಅಧ್ಯಕ್ಷ ಧನಂಜಯ ಮಟ್ಟು,ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಅತಿಕಾರಿಬೆಟ್ಟು ಗ್ರಾ.ಪಂ ಸದಸ್ಯ ದಯಾನಂದ ಮಟ್ಟು, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್,
ಶ್ರೀಪತಿ ಭಟ್ ಶಿಮಂತೂರು, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ,ಪತ್ರಕರ್ತ ಪುನೀತ್ ಕೃಷ್ಣ, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!