ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆಯ ನೈನಾಡು ಎಂಬಲ್ಲಿ 6 ತಿಂಗಳ ಕರುವನ್ನು ಕೊಂದ ಚಿರತೆ

ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.


ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6 ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಈ ಒಂದು ಕರುವನ್ನು ಕಟ್ಟಿಹಾಕಲಾಗಿತ್ತು.
ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂಡುಹೋಗಿರಬಹುದು ಎಂದು ಶಂಕಿಸಲಾಗಿದೆ
ನಾಯಿಗಳು ಬೊಗಳಿದೆಯಾದರು ಚಿರತೆ ಬಂದು ಈ ತರಹ ಮಾಡಬಹುದು ಎಂಬುದು ತಿಳಿದಿರಲಿಲ್ಲ ಎಂದು ಮನೆಯವರು ಹೇಳುತ್ತಾರೆ‌.


ಯಾಕೆಂದರೆ ಈವರೆಗೆ ಪರಿಸರದಲ್ಲಿ ಚಿರತೆ ದಾಳಿ ಬಗ್ಗೆ ತಿಳಿದಿಲ್ಲ. ಹಾಗಾಗಿ ನಾಯಿಗಳು ಅಷ್ಟು ಜೋರಾಗಿ ಬೊಗಳಿದರೂ ಇಂತಹ ಯೋಚನೆ ಬಂದಿರಲಿಲ್ಲ.
ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಕರುವನ್ನು ಎಳೆದುಕೊಂಡು ಹೋಗಿ ಕೊಂದು‌‌ಬಳಿಕ ತಿಂದಿದೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!