ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆಯ ನೈನಾಡು ಎಂಬಲ್ಲಿ 6 ತಿಂಗಳ ಕರುವನ್ನು ಕೊಂದ ಚಿರತೆ

ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.


ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6 ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಈ ಒಂದು ಕರುವನ್ನು ಕಟ್ಟಿಹಾಕಲಾಗಿತ್ತು.
ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂಡುಹೋಗಿರಬಹುದು ಎಂದು ಶಂಕಿಸಲಾಗಿದೆ
ನಾಯಿಗಳು ಬೊಗಳಿದೆಯಾದರು ಚಿರತೆ ಬಂದು ಈ ತರಹ ಮಾಡಬಹುದು ಎಂಬುದು ತಿಳಿದಿರಲಿಲ್ಲ ಎಂದು ಮನೆಯವರು ಹೇಳುತ್ತಾರೆ‌.


ಯಾಕೆಂದರೆ ಈವರೆಗೆ ಪರಿಸರದಲ್ಲಿ ಚಿರತೆ ದಾಳಿ ಬಗ್ಗೆ ತಿಳಿದಿಲ್ಲ. ಹಾಗಾಗಿ ನಾಯಿಗಳು ಅಷ್ಟು ಜೋರಾಗಿ ಬೊಗಳಿದರೂ ಇಂತಹ ಯೋಚನೆ ಬಂದಿರಲಿಲ್ಲ.
ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಕರುವನ್ನು ಎಳೆದುಕೊಂಡು ಹೋಗಿ ಕೊಂದು‌‌ಬಳಿಕ ತಿಂದಿದೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!