ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆಯ ನೈನಾಡು ಎಂಬಲ್ಲಿ 6 ತಿಂಗಳ ಕರುವನ್ನು ಕೊಂದ ಚಿರತೆ

ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.


ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6 ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಈ ಒಂದು ಕರುವನ್ನು ಕಟ್ಟಿಹಾಕಲಾಗಿತ್ತು.
ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂಡುಹೋಗಿರಬಹುದು ಎಂದು ಶಂಕಿಸಲಾಗಿದೆ
ನಾಯಿಗಳು ಬೊಗಳಿದೆಯಾದರು ಚಿರತೆ ಬಂದು ಈ ತರಹ ಮಾಡಬಹುದು ಎಂಬುದು ತಿಳಿದಿರಲಿಲ್ಲ ಎಂದು ಮನೆಯವರು ಹೇಳುತ್ತಾರೆ‌.


ಯಾಕೆಂದರೆ ಈವರೆಗೆ ಪರಿಸರದಲ್ಲಿ ಚಿರತೆ ದಾಳಿ ಬಗ್ಗೆ ತಿಳಿದಿಲ್ಲ. ಹಾಗಾಗಿ ನಾಯಿಗಳು ಅಷ್ಟು ಜೋರಾಗಿ ಬೊಗಳಿದರೂ ಇಂತಹ ಯೋಚನೆ ಬಂದಿರಲಿಲ್ಲ.
ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಕರುವನ್ನು ಎಳೆದುಕೊಂಡು ಹೋಗಿ ಕೊಂದು‌‌ಬಳಿಕ ತಿಂದಿದೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!