ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.
ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6 ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಈ ಒಂದು ಕರುವನ್ನು ಕಟ್ಟಿಹಾಕಲಾಗಿತ್ತು.
ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂಡುಹೋಗಿರಬಹುದು ಎಂದು ಶಂಕಿಸಲಾಗಿದೆ
ನಾಯಿಗಳು ಬೊಗಳಿದೆಯಾದರು ಚಿರತೆ ಬಂದು ಈ ತರಹ ಮಾಡಬಹುದು ಎಂಬುದು ತಿಳಿದಿರಲಿಲ್ಲ ಎಂದು ಮನೆಯವರು ಹೇಳುತ್ತಾರೆ.
ಯಾಕೆಂದರೆ ಈವರೆಗೆ ಪರಿಸರದಲ್ಲಿ ಚಿರತೆ ದಾಳಿ ಬಗ್ಗೆ ತಿಳಿದಿಲ್ಲ. ಹಾಗಾಗಿ ನಾಯಿಗಳು ಅಷ್ಟು ಜೋರಾಗಿ ಬೊಗಳಿದರೂ ಇಂತಹ ಯೋಚನೆ ಬಂದಿರಲಿಲ್ಲ.
ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಕರುವನ್ನು ಎಳೆದುಕೊಂಡು ಹೋಗಿ ಕೊಂದುಬಳಿಕ ತಿಂದಿದೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…