ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.
ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6 ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಈ ಒಂದು ಕರುವನ್ನು ಕಟ್ಟಿಹಾಕಲಾಗಿತ್ತು.
ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂಡುಹೋಗಿರಬಹುದು ಎಂದು ಶಂಕಿಸಲಾಗಿದೆ
ನಾಯಿಗಳು ಬೊಗಳಿದೆಯಾದರು ಚಿರತೆ ಬಂದು ಈ ತರಹ ಮಾಡಬಹುದು ಎಂಬುದು ತಿಳಿದಿರಲಿಲ್ಲ ಎಂದು ಮನೆಯವರು ಹೇಳುತ್ತಾರೆ.
ಯಾಕೆಂದರೆ ಈವರೆಗೆ ಪರಿಸರದಲ್ಲಿ ಚಿರತೆ ದಾಳಿ ಬಗ್ಗೆ ತಿಳಿದಿಲ್ಲ. ಹಾಗಾಗಿ ನಾಯಿಗಳು ಅಷ್ಟು ಜೋರಾಗಿ ಬೊಗಳಿದರೂ ಇಂತಹ ಯೋಚನೆ ಬಂದಿರಲಿಲ್ಲ.
ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಕರುವನ್ನು ಎಳೆದುಕೊಂಡು ಹೋಗಿ ಕೊಂದುಬಳಿಕ ತಿಂದಿದೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…