ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಣಿಪಾಲ ಪದವಿಪೂರ್ವ ಕಾಲೇಜಿನಲ್ಲಿ ಡಿ.27 ರಿಂದ 30ರವರೆಗೆ ‘ಅಮೃತ ಪರ್ವ’

ಉಡುಪಿ: 1948ರಲ್ಲಿ ಆರಂಭಗೊಂಡ ಮಣಿಪಾಲ ಪದವಿ ಪೂರ್ವ ಕಾಲೇಜು ಇದೀಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ‘ಅಮೃತ ಪರ್ವ’ ಶೀರ್ಷಿಕೆಯೊಂದಿಗೆ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮ 2023-24 ಅನ್ನು ಇದೇ ಬರುವ ಡಿ. 27ರಿಂದ 30ರ ವರೆಗೆ ಆಚರಿಸಲಾಗುತ್ತಿದೆ.


ಈ ಕುರಿತು ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲೆ ರೂಪಾ ಎಲ್. ಭಟ್ ಅವರು, ಡಿ. 24ರಂದು ಹಳೆ ವಿದ್ಯಾರ್ಥಿಗಳ ಪುನರ್ ಮಿಲನ ಕಾರ್ಯಕ್ರಮ ನಡೆಯಲಿದ್ದು, ಹಳೆ ವಿದ್ಯಾರ್ಥಿಗಳು ಆಗಮಿಸುವ ನಿವೃತ್ತ ಶಿಕ್ಷಕರು, ಉಪನ್ಯಾಸಕರ ಪಾಠ ಪ್ರವಚನಗಳನ್ನು ಕೇಳಲಿದ್ದಾರೆ ಎಂದರು.
ಡಿ.27ರಂದು ಬೆಳಿಗ್ಗೆ 9.30ಕ್ಕೆ ನವೀಕೃತ ಅಮೃತ ಮಹೋತ್ಸವ ರಂಗಮಂಟಪ ಹಾಗೂ ನವೀಕೃತ ತರಗತಿ ಕೊಠಡಿಗಳ ಉದ್ಘಾಟನೆ ನೆರವೇರಲಿದೆ. ಅಂದು ಸಂಜೆ 6ಗಂಟೆಗೆ ನಡೆಯಲಿರುವ ಸಾಂಸ್ಕೃತಿಕ ಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಪ್ರಸೂತಿ ತಜ್ಞೆ ಡಾ. ಗಿರಿಜಾ ಉದ್ಘಾಟಿಸಲಿದ್ದಾರೆ. ಮಣಿಪಾಲ ಪ.ಪೂ. ಕಾಲೇಜಿನ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಕಾರಂತ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ‘ಶ್ರೀಕೃಷ್ಣ ಪಾರಿಜಾತ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.
ಡಿ. 28ರಂದು ಸಂಜೆ 4ಗಂಟೆಗೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿ ಮಣಿಪಾಲ ಠಾಣೆಯ ಉಪನಿರೀಕ್ಷಕ ದೇವರಾಜ್ ಟಿ.ವಿ. ಅವರು ಅಮೃತ ಶೋಭಾಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಿಂಡಿಕೇಟ್ ಸರ್ಕಲ್ ನಿಂದ ಆರಂಭಗೊಳ್ಳುವ ಶೋಭಾಯಾನವು ಟೈಗರ್ ಸರ್ಕಲ್, ಗೋಲ್ಡನ್ ಜ್ಯುಬಿಲಿ ಹಾಲ್, ಆರ್.ಎಸ್.ಬಿ ಸಭಾಭವನದಿಂದ ಸಾಗಿಬಂದು ಕಾಲೇಜಿನಲ್ಲಿ ಮುಕ್ತಾಯಗೊಳ್ಳಲಿದೆ. ಬಳಿಕ ಸಂಜೆ 6ಗಂಟೆಗೆ ಪ್ರಾಥಮಿಕ‌ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಅಧ್ಯಕ್ಷ ಟಿ. ಸುಧಾಕರ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಕರ್ನಾಟಕ ಶಾಸ್ತ್ರೀಯ ಗಾಯನ, ರಾಮಕಥಾ ನೃತ್ಯ ರೂಪಕ ಹಾಗೂ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರಸ್ತುತಗೊಳ್ಳಲಿದೆ ಎಂದು ತಿಳಿಸಿದರು.


ಡಿ. 29ರಂದು ಸಂಜೆ 5.30ಕ್ಕೆ ಉಡುಪಿ ಸ್ವದಾಮ್ ಬ್ಯಾಂಡ್ ಅವರಿಂದ ‘ಸ್ವರ ಸಾಂಗತ್ಯ’ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 6ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಬಳಿಕ ‘ನವದುರ್ಗಾ’ ಶಾಸ್ತ್ರೀಯ ನೃತ್ಯ ಹಾಗೂ ಹಳೆ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಮಂಗಳೂರಿನ ಕಲಾಸಂಗಮ ಕಲಾವಿದರು ‘ಶಿವದೂತೆ ಗುಳಿಗೆ’ ತುಳು ನಾಟಕ ಪ್ರಸ್ತುತ ಪಡಿಸಲಿದ್ದಾರೆ ಎಂದು ಹೇಳಿದರು.


ಕಾಲೇಜಿನ ಉಪಪ್ರಾಂಶುಪಾಲೆ ಅನಿತಾ ಮಲ್ಯ ಮಾತನಾಡಿ, ಡಿ. 30ರಂದು ಸಂಜೆ 5ಗಂಟೆ ವೀಣಾವಾದನ ಪ್ರಸ್ತುತಗೊಳ್ಳಲಿದೆ. ಸಂಜೆ 6ಗಂಟೆಗೆ ಸಭಾಕಾರ್ಯಕ್ರಮ ಹಾಗೂ ಗೌರವ ಸಮರ್ಪಣೆ ನಡೆಯಲಿದ್ದು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಣಿಪಾಲ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ರೂಪಾ ಎಲ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ‘ಏಕಲವ್ಯ’ ನಾಟಕ ಪ್ರದರ್ಶನಗೊಳ್ಳಲಿದೆ. ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಜರುಗಲಿದೆ. ಆ ಬಳಿಕ ಮುಲ್ಕಿ ರಾಗ್ ರಂಗ್ ಆರ್ಕೆಸ್ಟ್ರಾ ಬಳಗದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್ ಕಿಣಿ, ಕಾರ್ಯದರ್ಶಿ ಜಯರಾಮ್ ಶೆಟ್ಟಿಗಾರ್, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಸಂಚಾಲಕ ಪ್ರಕಾಶ್ ಶೆಟ್ಟಿ, ಟ್ರಸ್ಟಿ ಹರಿಪ್ರಸಾದ್ ರೈ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!