ಜನ ಮನದ ನಾಡಿ ಮಿಡಿತ

Advertisement

ಸಂತ ತೆರೇಸಮ್ಮ ದೇವಾಲಯ ವತಿಯಿಂದ ಸೌಹಾರ್ದ ಕ್ರಿಸ್ಮಸ್ 2023 ಆಚರಣೆ ಅಂಗವಾಗಿ ಪದ್ಮಶ್ರೀ ಭಟ್ ಸಹಿತ ಹಲವರಿಗೆ ಗೌರವ ಸನ್ಮಾನ, ಸರ್ವಧರ್ಮದ ಅನಾವರಣ

ನಿಡ್ಡೋಡಿ ಸಂತ ತೆರಜಮ್ಮ ದೇವಾಲಯ ಚರ್ಚ್ ಆವರಣದಲ್ಲಿ ಸೌಹಾರ್ದ ಕ್ರಿಸ್ಮಸ್ 2023 ಆಚರಿಸಲಾಯಿತು ಸರ್ವ ಧರ್ಮಿಯ ಸಂವಾದ ಮತ್ತು ಯುವ ಆಯೋಗದ ಜಂಟಿ ಆಶ್ರಯದಲ್ಲಿ ಸರ್ವ ಧರ್ಮಿಯರ ಜೊತೆಗೂಡಿ ಚರ್ಚಿನ ಆವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅತಿಥಿಗಳಾಗಿ ಮಾಜಿ ಶಾಸಕರು ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನ ಸನ್ಮಾನಿಸಲಾಯಿತು.

ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೊನಾಲ್ಡ್ ಸಿಲ್ವನ್ ಡಿಸೋಜ, ಕಲಾವಿದ ಸದಾಶಿವ ಪೂಜಾರಿ, ಆರದಿರಲಿ ಬದುಕು ಆರಾಧನಾ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್, ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಲೆರೊಯ್ ಪಿಂಟೊ ಅವರನ್ನು ಸನ್ಮಾನಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ.ಡೇನಿಸ್ ಸುವಾರಿಸ್ ಸ್ವಾಗತಿಸಿದರು, ಕಾರ್ಯದರ್ಶಿ ಜೀವನ್ ಕ್ರಾಸ್ತಾ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು

. ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ ವಂದಿಸಿದರು. ರೇಶ್ಮಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೋನ್ ಕಾರ್ಡೋಜ, ಭಗಿನಿ ಸಿಸ್ಟರ್ ಸೆವ್ರಿನ್ ಫೆರ್ನಾಂಡಿಸ್, ಕಿಶೋರ್ ಡಿಸೋಜ ಇನ್ನಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕ್ರಿಸ್ಮಸ್ ಕ್ಯಾರಲ್ಸ್ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸರ್ವರಿಗೂ ಕ್ರಿಸ್ಮಸ್ ತಿನಿಸುಗಳನ್ನು ಹಂಚಲಾಯಿತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!