ನಿಡ್ಡೋಡಿ ಸಂತ ತೆರಜಮ್ಮ ದೇವಾಲಯ ಚರ್ಚ್ ಆವರಣದಲ್ಲಿ ಸೌಹಾರ್ದ ಕ್ರಿಸ್ಮಸ್ 2023 ಆಚರಿಸಲಾಯಿತು ಸರ್ವ ಧರ್ಮಿಯ ಸಂವಾದ ಮತ್ತು ಯುವ ಆಯೋಗದ ಜಂಟಿ ಆಶ್ರಯದಲ್ಲಿ ಸರ್ವ ಧರ್ಮಿಯರ ಜೊತೆಗೂಡಿ ಚರ್ಚಿನ ಆವರಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅತಿಥಿಗಳಾಗಿ ಮಾಜಿ ಶಾಸಕರು ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನ ಸನ್ಮಾನಿಸಲಾಯಿತು.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೊನಾಲ್ಡ್ ಸಿಲ್ವನ್ ಡಿಸೋಜ, ಕಲಾವಿದ ಸದಾಶಿವ ಪೂಜಾರಿ, ಆರದಿರಲಿ ಬದುಕು ಆರಾಧನಾ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್, ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಲೆರೊಯ್ ಪಿಂಟೊ ಅವರನ್ನು ಸನ್ಮಾನಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ.ಡೇನಿಸ್ ಸುವಾರಿಸ್ ಸ್ವಾಗತಿಸಿದರು, ಕಾರ್ಯದರ್ಶಿ ಜೀವನ್ ಕ್ರಾಸ್ತಾ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು
. ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ ವಂದಿಸಿದರು. ರೇಶ್ಮಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೋನ್ ಕಾರ್ಡೋಜ, ಭಗಿನಿ ಸಿಸ್ಟರ್ ಸೆವ್ರಿನ್ ಫೆರ್ನಾಂಡಿಸ್, ಕಿಶೋರ್ ಡಿಸೋಜ ಇನ್ನಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕ್ರಿಸ್ಮಸ್ ಕ್ಯಾರಲ್ಸ್ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸರ್ವರಿಗೂ ಕ್ರಿಸ್ಮಸ್ ತಿನಿಸುಗಳನ್ನು ಹಂಚಲಾಯಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…