ಇತರೆ

ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ

ಉಡುಪಿ: ಇಲ್ಲಿನ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮದ ಕಳೆಯು ಕಟ್ಟಿತ್ತು. ಮಂಗಳವಾರ ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಇಂದು ಬೆಳಿಗ್ಗೆ ಎರಡು ಜೋಡಿಗಳ ವಿವಾಹ ಮಹೋತ್ಸವವು ಅಧಿಕಾರಿಗಳು, ಗಣ್ಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನಡೆಯಿತು.

ವಿವಾಹ ನಿಶ್ಚಯ ಕಾರ್ಯಕ್ರಮ ಜಿಲ್ಲಾಡಳಿತದ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ವರರ ಆರೋಗ್ಯ, ನಡತೆ, ಅವರು ಗಳಿಸಿರುವ ಆದಾಯ, ನಡತೆ ಮತ್ತಿತರ ವಿವರಗಳನ್ನು ಕಲೆ ಹಾಕುವುದರೊಂದಿಗೆ ಜಿಲ್ಲಾಡಳಿತ, ವರನ ಗುರು ಹಿರಿಯರು ಒಪ್ಪಿಗೆ ನೀಡಿದರು.
ತುಮಕೂರು ಮೂಲದ 32 ವರ್ಷ ಪ್ರಾಯದ ಶೀಲಾ ರವರು ಕಳೆದ 4 ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಿದ್ದು, ಅನಾಥೆಯಾದ ಇವರನ್ನು ಕುಂದಾಪುರ ತಾಲೂಕಿನ ಬೆದ್ರಾಡಿಯ ಮಹಾಬಲ ಶಾಸ್ತ್ರೀಯ ಸುಪುತ್ರರಾದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದ 43 ವರ್ಷದ ಗಣೇಶ್ ಶಾಸ್ತ್ರೀ ಅವರೊಂದಿಗೆ ಹಾಗೂ ಭದ್ರಾವತಿ ಮೂಲದ 21 ವರ್ಷ ಪ್ರಾಯದ ಕುಮಾರಿ ಅವರು ಕಳೆದ ಎರಡು ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಿದ್ದು, ಪೋಷಕರಿಲ್ಲದ ಇವರನ್ನು ಯಲ್ಲಾಪುರ ಮೂಲದ ನಂದೊಳ್ಳಿ ಅಣಲಗಾರದ ಹಾಲಿ ಬೆಳ್ಳಂಜೆಯಲ್ಲಿ ಪುರೋಹಿತ ಕೆಲಸ ನಿರ್ವಹಿಸುತ್ತಿರುವ 29 ವರ್ಷ ಪ್ರಾಯದ ಸತ್ಯನಾರಾಯಣ ಶ್ರೀಧರ ಭಟ್ಟ ಅವರೊಂದಿಗೆ ಮದುವೆ ನೆರವೇರಿತು.


ಮದುವೆ ಮುಹೂರ್ತದ ಶುಭ ಸಂದರ್ಭದಲ್ಲಿ ನವ ಜೋಡಿಗಳಿಗೆ ಧಾರೆ ಮುಹೂರ್ತದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್, ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಎಸ್, ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪಾರಾಣಿ, ವಿವಿಧ ಮಹಿಳಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಸೇವಕರು ಸೇರಿದಂತೆ ಮತ್ತಿತರರು ಆಶೀರ್ವದಿಸಿದರು.
ವಿವಾಹ ಸಂಭ್ರಮವು ಖಾಸಗಿ ಮದುವೆಗಿಂತ ಕಡಿಮೆ ಇಲ್ಲದಂತೆ ಮದುವೆ ಚಪ್ಪರ, ಸ್ವಾಗತ ದ್ವಾರ, ಮಹಿಳಾ ಮಣಿಗಳು ಬಂದವರನ್ನು ತಂಪು ಪಾನೀಯ ಹಾಗೂ ಗುಲಾಬಿ ಹೂ ನೀಡುವುದರೊಂದಿಗೆ ಆಮಂತ್ರಿತರನ್ನು ಸ್ವಾಗತಿಸುತ್ತಿದ್ದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಮ್ಮ ಕುಟುಂಬದ ಮದುವೆಯಲ್ಲಿ ಆಮಂತ್ರಿತರನ್ನು ಸ್ವಾಗತಿಸುವ ರೀತಿಯಲ್ಲಿ ಸ್ವಾಗತಿಸಿ, ನಗುನಗುತ್ತಾ ಪ್ರತಿಯೊಬ್ಬರನ್ನು ಮಾತನಾಡುತ್ತಿದ್ದರು. ಅರ್ಚಕರು ಶಾಸ್ತೊçÃಸ್ತçವಾಗಿ ಅಗ್ನಿ ಸಾಕ್ಷಿಯಾಗಿ ಮದುವೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರೆ, ಆಮಂತ್ರಿತರು ವಧು- ವರರಿಗೆ ಉಡುಗೊರೆಗಳನ್ನು ನೀಡುತ್ತಿರುವುದು ಸಹ ವಿಶೇ಼ವಾಗಿತ್ತು. ನವಜೋಡಿಯೊಂದಿಗೆ ಫೋಟೋ ಸೆಷನ್‌ನಲ್ಲಿ ನಗುನಗುತ್ತಾ ಭಾಗವಹಿಸುತ್ತಿದ್ದರು. ಮಹಿಳಾ ನಿಲಯದ ಸಹಪಾಠಿಗಳ ಮುಖದಲ್ಲಿಯೂ ಸಹ ಉತ್ಸಾಹ, ಸಂತೋಷ ಮಡುಗಟ್ಟಿತ್ತು. ನವಜೋಡಿಗಳ ಮುಖದಲ್ಲಿಯೂ ಸಹ ಮನೋಲ್ಲಾಸ ಎದ್ದು ಕಾಣುತ್ತಿತ್ತು. ಬಂದ ಆಮಂತ್ರಿತರು ಲಾಡು, ಹೋಳಿಗೆ, ಊಟದ ರಸದೌತಣ ಸವಿದರು.
ವರರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ಕಳೆದ 2-3 ವರ್ಷಗಳಿಂದ ವಧುವಿನ ಅನ್ವೇಷಣೆಯಲ್ಲಿದ್ದು, ಸ್ನೇಹಿತರು ರಾಜ್ಯ ಮಹಿಳಾ ನಿಲಯದಲ್ಲಿ ಹೆಣ್ಣು ಮಕ್ಕಳು ಇರುವ ಬಗ್ಗೆ ತಿಳಿಸಿದಾಗ ನಾವು ಅಧಿಕಾರಿಗಳನ್ನು ಸಂಪರ್ಕಿಸಿ, ಅವರೊಂದಿಗೆ ವಿಶ್ವಾಸ ಗಳಿಸಿ, ಜಿಲ್ಲಾಡಳಿತ, ನಮ್ಮ ಗುರು-ಹಿರಿಯರು ಹಾಗೂ ವಧುವಿನ ಒಪ್ಪಿಗೆಯೊಂದಿಗೆ ಈ ಮದುವೆ ನಡೆಯಿತು. ಇದು ನನಗೆ ಸಂತೋಷದಾಯಕವಾದುದು. ಭವಿಷ್ಯದಲ್ಲಿ ಉತ್ತಮ ಜೀವನ ನಡೆಸುವುದಾಗಿ ತಿಳಿಸಿದರೆ, ವಧು ರವರು ಅಧಿಕಾರಿ ವರ್ಗದವರು ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸುವ ಉದ್ದೇಶದಿಂದ ನಮ್ಮ ಒಪ್ಪಿಗೆ, ನೀತಿ-ನಿಯಮಗಳ ಅನ್ವಯ ಸಂಗಾತಿಯನ್ನಾಗಿಸಿರುವುದು ಮಗುಳುನಗೆಯ ನಾಚಿಕೆಯೊಂದಿಗೆ ಸಂತಸದಾಯಕ ಎಂದರು.
ಉಡುಪಿಯ ರಾಜ್ಯ ಮಹಿಳಾ ನಿಲಯವು 1976 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈವರೆಗೆ 24 ಮಹಿಳೆಯರ ವಿವಾಹವು ಈ ಸಂಸ್ಥೆಯಲ್ಲಿ ನಡೆದಿದೆ. ಪ್ರಸ್ತುತ 63 ಜನ ಮಹಿಳೆಯರು ಹಾಗೂ 5 ಜನ ಮಕ್ಕಳು ಇದ್ದಾರೆ. ಇವರಲ್ಲಿ ಮೂರು ಹೆಣ್ಣು ಮಕ್ಕಳು ಕಾಲೇಜು ಶಿಕ್ಷಣವನ್ನು ಹೊಂದುತ್ತಿದ್ದರೆ, ಬಾಕಿ ಉಳಿದ ಮಹಿಳೆಯರು ಊದು ಬತ್ತಿ, ಮೇಣದ ಬತ್ತಿ ಸೇರಿದಂತೆ ಮತ್ತಿತರ ತಯಾರಿಕಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

17 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

17 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

18 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

7 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

7 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

7 days ago