ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್(59) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನ ಹೊಂದಿದರು.

ಎಲ್ಲಾ ರೀತಿಯ ವೇಷಗಳನ್ನೂ ಸಮರ್ಥವಾಗಿ ನಿರ್ವಹಿಸುತಿದ್ದ ಬಾಲಕೃಷ್ಣ ನಾಯಕ್ ಪಾರಂಪರಿಕ ಹೆಜ್ಜೆಗಾರಿಕೆ ಹಾಗೂ ಮಾತುಗಾರಿಕೆಗೆ ಖ್ಯಾತರಾಗಿದ್ದರು. ಮಾರಣಕಟ್ಟೆ, ಕಳವಾಡಿ, ಅಮೃತೇಶ್ವರಿ, ಮಂದಾರ್ತಿ, ಹಾಲಾಡಿ, ಮೇಗರವಳ್ಳಿ, ಮಡಾಮಕ್ಕಿ ಹಾಗೂ ಹಿರಿಯಡ್ಕ ಮೇಳ ಸೇರಿದಂತೆ ಸುಮಾರು ಮೂರೂವರೆ ದಶಕಗಳ ಕಾಲ ಯಕ್ಷಗಾನ ಕಲಾಸೇವೆಗೈದಿದ್ದಾರೆ.
ಇವರು ಓರ್ವ ಉತ್ತಮ ಪ್ರಸಾಧನತಜ್ಞರೂ ಆಗಿದ್ದರು.ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಯಕ್ಷನಿಧಿಯ ಸದಸ್ಯರಾಗಿದ್ದ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.



