ಜನ ಮನದ ನಾಡಿ ಮಿಡಿತ

Advertisement

ಆಯುರ್ವೇದ ವೈದ್ಯರಿಗೆ ಅಲೋಪತಿ ಔಷಧಿ ಬಳಕೆಗೆ ಅವಕಾಶ ನೀಡುವಂತೆ ಒತ್ತಾಯ

ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ ಘಟಕದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಆಯುರ್ವೇದ ಪದ್ಧತಿ ಚಿಕಿತ್ಸೆಯು ನಮ್ಮ ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣಾ ವ್ಯವಸ್ಥೆಯಾಗಿದ್ದು, ಇದು ಔಷಧ ಮತ್ತು ತತ್ವಶಾಸ್ತ್ರಗಳ ಸಂಮ್ಮಿಶ್ರಣ ವಾಗಿದೆ. ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಮೂಲ ಪದ್ಧತಿಯೊಂದಿಗೆ ಅಗತ್ಯ ಅಲೋಪತಿ ಔಷಧಗಳನ್ನು ಬಳಸದಂತೆ ನಿರ್ಬಂಧಿಸುವ ರಾಜ್ಯ ಸರಕಾರದ ಕಾನೂನು ಇವರ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆಯುರ್ವೇದ ವೈದ್ಯರಿಗೆ ಕೆಪಿಎಂಇಎ ಕಾಯ್ದೆಯಡಿಯಲ್ಲಿ ಪರಿವೀಕ್ಷಣೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತಿದ್ದು, ಇದನ್ನು ತಕ್ಷಣ ನಿಲ್ಲಿಸಬೇಕಿದೆ. ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಆಯುರ್ವೇದ ವೈದ್ಯರಿಗೂ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು. ಇದಕ್ಕಾಗಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಅದನ್ನು ಜಾರಿಗೆ ತರಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!