ಉಡುಪಿ: ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ವೈದ್ಯರ ಘಟಕದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಆಯುರ್ವೇದ ಪದ್ಧತಿ ಚಿಕಿತ್ಸೆಯು ನಮ್ಮ ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣಾ ವ್ಯವಸ್ಥೆಯಾಗಿದ್ದು, ಇದು ಔಷಧ ಮತ್ತು ತತ್ವಶಾಸ್ತ್ರಗಳ ಸಂಮ್ಮಿಶ್ರಣ ವಾಗಿದೆ. ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಮೂಲ ಪದ್ಧತಿಯೊಂದಿಗೆ ಅಗತ್ಯ ಅಲೋಪತಿ ಔಷಧಗಳನ್ನು ಬಳಸದಂತೆ ನಿರ್ಬಂಧಿಸುವ ರಾಜ್ಯ ಸರಕಾರದ ಕಾನೂನು ಇವರ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಆಯುರ್ವೇದ ವೈದ್ಯರಿಗೆ ಕೆಪಿಎಂಇಎ ಕಾಯ್ದೆಯಡಿಯಲ್ಲಿ ಪರಿವೀಕ್ಷಣೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತಿದ್ದು, ಇದನ್ನು ತಕ್ಷಣ ನಿಲ್ಲಿಸಬೇಕಿದೆ. ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಆಯುರ್ವೇದ ವೈದ್ಯರಿಗೂ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅಲೋಪತಿ ಔಷಧಿ ಬಳಕೆ ಮಾಡಲು ಅವಕಾಶ ನೀಡಬೇಕು. ಇದಕ್ಕಾಗಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಅದನ್ನು ಜಾರಿಗೆ ತರಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಸಲ್ಲಿಸಲಾಯಿತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…