ಪುತ್ತೂರು: ಪುತ್ತೂರು ಕಾವು ಲಯನ್ಸ್ ಕ್ಲಬ್, ಪುತ್ತುರು ಪಾಣಾಜೆ ಲಯನ್ಸ್ ಕ್ಲಬ್, ಆಲಂಗಾರು ದುರ್ಗಾಂಬ ಲಯನ್ಸ್ ಕ್ಲಬ್ ಮತ್ತು ಪುತ್ತರ್ದ ಮುತ್ತು ಲಯನ್ಸ್ ಕ್ಲಬ್ಗಳು ಹಲವು ಸಮಾಜಮುಖಿ ಸೇವಾ ಕಾರ್ಯ ಮಾಡುತ್ತಾ ಬಂದಿದ್ದು ಈ ಭಾಗದ ಅತ್ಯುತ್ತಮ ಕ್ಲಬ್ಗಳಾಗಿ ಮೂಡಿ ಬಂದಿದೆ ಎಂದು ಲಯನ್ಸ್ ಕ್ಲಬ್ ೩೧೭ಡಿ ಇದರ ಜಿಲ್ಲಾ ಗವರ್ನರ್ ಮೆಲ್ವಿನ್ ಡಿ’ಸೋಜಾ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಲಯನ್ಸ್ ಕ್ಲಬ್ 4 ಕಂದಾಯ ಜಿಲ್ಲೆಗಳಾಗಿ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಒಟ್ಟಾಗಿ 121 ಕ್ಲಬ್ಗಳಿವೆ. ಸುಮಾರು 4,600 ಮಂದಿ ಸದಸ್ಯರಿದ್ದಾರೆ. ಈ ಭಾರಿ ‘ಬಿ ಕೈಂಡ್’ (ಕರುಣಾಮಯಿ) ಎಂಬ ಘೋಷವಾಕ್ಯದೊದಿಗೆ ವಿವಿಧ ಸೇವಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಹಿರಿಯ ನಾಗರಿಕರ ಸೇವೆ, ವಿಶೇಷ ಮಕ್ಕಳಿಗೆ ಪ್ರೇರಣೆ, ಯುವಜನಾಂಗಕ್ಕೆ ಸ್ಪೂರ್ತಿ, ದೇಶಪ್ರೇಮ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳು ಒಳಗೊಂಡಿವೆ. ಇದಲ್ಲದೆ ದೃಷ್ಟಿ, ಯುವಜನ, ವಿಪತ್ತು ಪರಿಹಾರ, ಮಾನವೀಯ ಸೇವೆಗಳು, ಮಧುಮೇಹ, ಬಾಲ್ಯದ ಕ್ಯಾನ್ಸರ್, ಪರಿಸರ ಮತ್ತು ಹಸಿವು ನಿವಾರಣೆಗೆ ಸಂಬAಧಿಸಿ ಹಲವು ಕಾರ್ಯಕ್ರಮ ನಡೆಸಲು ಉದ್ದೇಶಿಸಿದಂತೆ ಪುತ್ತೂರಿನ ನಾಲ್ಕು ಕ್ಲಬ್ಗಳು ಈ ಎಲ್ಲಾ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದ್ದು, ಅದರಲ್ಲಿ ಕೆಲವೊಂದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಈ ಸಲದ ಸ್ಮೆöÊಲ್ ವಿಶೇಷ ಕಾರ್ಯಕ್ರಮವಾಗಿದ್ದು, ಇದರ ಅಡಿಯಲ್ಲಿ 121 ಕ್ಲಬ್ಗಳು ಸೇವೆ ಸಲ್ಲಿಸುತ್ತಿವೆ. ವಿಶೇಷ ಕಾರ್ಯಕ್ರಮವಾಗಿ ರೂ. ೧ಕೋಟಿ ಪೌಂಡೇಶನ್ಮೂಲಕ ಸೇವೆ ನೀಡಿದ್ದೇವೆ. ೪ ಹೊಸ ಕ್ಲಬ್, 7 ಲಿಯೋ ಕ್ಲಬ್ಗಳನ್ನು ಉದ್ಘಾಟಿಸಲಾಗುವುದು. ೫೦೦ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆಯಾಗಲಿದೆ. ಪುತ್ತೂರನಲ್ಲಿ ಲಿಯೋ ಕ್ಲಬ್ ಪುತ್ತೂರು ಮತ್ತು ಶ್ರೀ ರಾಮಕೃಷ್ಣ ಶಾಲೆಯಲ್ಲಿ ಲಿಯೋ ಕ್ಲಬ್ ಉದ್ಘಾಟನೆಯಾಗಲಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ದಿವ್ಯನಾಥ ಶೆಟ್ಟಿ, ಪುತ್ತೂರು ಪಾಣಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ, ಆಲಂಗಾರು ದುರ್ಗಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ರೈ ಮನವಳಿಕೆ, ಪುತ್ತರ್ದ ಮುತ್ತು ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರ ಪೈ, ಲಯನ್ಸ್ಕ್ಲಬ್ ಪ್ರಾಂತೀಯ ರಾಯಬಾರಿ ಗಣೇಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…