ಪುತ್ತೂರು: ಪುತ್ತೂರು ಕಾವು ಲಯನ್ಸ್ ಕ್ಲಬ್, ಪುತ್ತುರು ಪಾಣಾಜೆ ಲಯನ್ಸ್ ಕ್ಲಬ್, ಆಲಂಗಾರು ದುರ್ಗಾಂಬ ಲಯನ್ಸ್ ಕ್ಲಬ್ ಮತ್ತು ಪುತ್ತರ್ದ ಮುತ್ತು ಲಯನ್ಸ್ ಕ್ಲಬ್ಗಳು ಹಲವು ಸಮಾಜಮುಖಿ ಸೇವಾ ಕಾರ್ಯ ಮಾಡುತ್ತಾ ಬಂದಿದ್ದು ಈ ಭಾಗದ ಅತ್ಯುತ್ತಮ ಕ್ಲಬ್ಗಳಾಗಿ ಮೂಡಿ ಬಂದಿದೆ ಎಂದು ಲಯನ್ಸ್ ಕ್ಲಬ್ ೩೧೭ಡಿ ಇದರ ಜಿಲ್ಲಾ ಗವರ್ನರ್ ಮೆಲ್ವಿನ್ ಡಿ’ಸೋಜಾ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಲಯನ್ಸ್ ಕ್ಲಬ್ 4 ಕಂದಾಯ ಜಿಲ್ಲೆಗಳಾಗಿ ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಒಟ್ಟಾಗಿ 121 ಕ್ಲಬ್ಗಳಿವೆ. ಸುಮಾರು 4,600 ಮಂದಿ ಸದಸ್ಯರಿದ್ದಾರೆ. ಈ ಭಾರಿ ‘ಬಿ ಕೈಂಡ್’ (ಕರುಣಾಮಯಿ) ಎಂಬ ಘೋಷವಾಕ್ಯದೊದಿಗೆ ವಿವಿಧ ಸೇವಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಹಿರಿಯ ನಾಗರಿಕರ ಸೇವೆ, ವಿಶೇಷ ಮಕ್ಕಳಿಗೆ ಪ್ರೇರಣೆ, ಯುವಜನಾಂಗಕ್ಕೆ ಸ್ಪೂರ್ತಿ, ದೇಶಪ್ರೇಮ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳು ಒಳಗೊಂಡಿವೆ. ಇದಲ್ಲದೆ ದೃಷ್ಟಿ, ಯುವಜನ, ವಿಪತ್ತು ಪರಿಹಾರ, ಮಾನವೀಯ ಸೇವೆಗಳು, ಮಧುಮೇಹ, ಬಾಲ್ಯದ ಕ್ಯಾನ್ಸರ್, ಪರಿಸರ ಮತ್ತು ಹಸಿವು ನಿವಾರಣೆಗೆ ಸಂಬAಧಿಸಿ ಹಲವು ಕಾರ್ಯಕ್ರಮ ನಡೆಸಲು ಉದ್ದೇಶಿಸಿದಂತೆ ಪುತ್ತೂರಿನ ನಾಲ್ಕು ಕ್ಲಬ್ಗಳು ಈ ಎಲ್ಲಾ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದ್ದು, ಅದರಲ್ಲಿ ಕೆಲವೊಂದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ಈ ಸಲದ ಸ್ಮೆöÊಲ್ ವಿಶೇಷ ಕಾರ್ಯಕ್ರಮವಾಗಿದ್ದು, ಇದರ ಅಡಿಯಲ್ಲಿ 121 ಕ್ಲಬ್ಗಳು ಸೇವೆ ಸಲ್ಲಿಸುತ್ತಿವೆ. ವಿಶೇಷ ಕಾರ್ಯಕ್ರಮವಾಗಿ ರೂ. ೧ಕೋಟಿ ಪೌಂಡೇಶನ್ಮೂಲಕ ಸೇವೆ ನೀಡಿದ್ದೇವೆ. ೪ ಹೊಸ ಕ್ಲಬ್, 7 ಲಿಯೋ ಕ್ಲಬ್ಗಳನ್ನು ಉದ್ಘಾಟಿಸಲಾಗುವುದು. ೫೦೦ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆಯಾಗಲಿದೆ. ಪುತ್ತೂರನಲ್ಲಿ ಲಿಯೋ ಕ್ಲಬ್ ಪುತ್ತೂರು ಮತ್ತು ಶ್ರೀ ರಾಮಕೃಷ್ಣ ಶಾಲೆಯಲ್ಲಿ ಲಿಯೋ ಕ್ಲಬ್ ಉದ್ಘಾಟನೆಯಾಗಲಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ಕಾವು ಲಯನ್ಸ್ ಕ್ಲಬ್ ಅಧ್ಯಕ್ಷ ದಿವ್ಯನಾಥ ಶೆಟ್ಟಿ, ಪುತ್ತೂರು ಪಾಣಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಮಹಮ್ಮದ್ ಕುಕ್ಕುವಳ್ಳಿ, ಆಲಂಗಾರು ದುರ್ಗಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ರೈ ಮನವಳಿಕೆ, ಪುತ್ತರ್ದ ಮುತ್ತು ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರ ಪೈ, ಲಯನ್ಸ್ಕ್ಲಬ್ ಪ್ರಾಂತೀಯ ರಾಯಬಾರಿ ಗಣೇಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…