ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ: 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಂಚಾಲಕರಾದ ಅಜಿತ್ ಜೋಗಿ ಅವರು, ರಾಜ್ಯ ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ವಿದ್ಯಾರ್ಥಿಗಳ ಬಗ್ಗೆ ಅಸಡ್ಡೆ ತೋರಿದೆ ಎಂದು ವ್ಯಕ್ತಪಡಿಸಿದರು.
ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, 4 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದನ್ನು ರದ್ದುಗೊಳಿಸಿರುವ ಸರಕಾರ ಎಲ್ಲರಿಗೂ ಈ ಕೂಡಲೇ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಕೆ. ನಗರ ಖೆಲೋ ಭಾರತ್ ಪ್ರಮುಖರಾದ ಸ್ವಸ್ತಿಕ್ ನಗರ ಸಂಪರ್ಕ ಪ್ರಮುಖ್ ರವಿಚಂದ್ರ ಮತ್ತು ಪ್ರಮುಖರಾದ ಕಿಶೋರ್, ನವೀನ್, ಹರ್ಷೇಂದ್ರ, ವರುಣ್, ಪ್ರಷ್ಮಾ, ಮಂಗಳಗೌರಿ, ಕೃತಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!