ಮೂಡುಬಿದಿರೆ: ಮೂಡುಬಿದಿರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರಗಳು ಹಾಗೂ ಟೆಕ್ನಿಷಿಯನ್ಸ್ಗಳನ್ನು ಮುಂದಿನ ತಿಂಗಳೊಳಗೆ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೆಳಿದರು.
ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು ಮುಂದಿನ ತಿಂಗಳಿನಿoದ ತಾಲೂಕುವಾರು ಜನಸ್ಪಂದನ ಸಭೆ ನಡೆಸಿ ಸ್ಥಳೀಯವಾದ ಸಣ್ಣಪುಟ್ಟ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಜನಸಾಮಾನ್ಯರು ಸಲ್ಲಿಸುವ ಅರ್ಜಿಗಳು ಕಾಲಮಿತಿಯೊಳಗೆ ಇತ್ಯರ್ಥಗೊಳ್ಳಲು ಇದು ಸಹಕಾರಿಯಾಗಲಿದೆ ಎಂದ ಅವರು ಜನರಿಗೆ ನೇರ ತಲುಪುವ ಸರ್ಕಾರದ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದು ಯುವನಿಧಿಯನ್ನು ಮುಂದಿನ ತಿಂಗಳಿನಿAದ ಜಾರಿಗೊಳಿಸಲಾಗುವುದು ಎಂದರು.
ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಪೇಟೆಯ ಹೃದಯಭಾಗದಲ್ಲಿ ಪುರಸಭೆ ಮಾರುಕಟ್ಟೆಯ ಕಾಮಗಾರಿ ಕಾನೂನು ತೊಡಗಿಕಿಂದಾಗಿ ಅರ್ಧದಲ್ಲೇ ನಿಂತಿದೆ. ಇದರಿಂದ ವ್ಯಾಪಾರಿಗಳಿಗೆ ಮಾತ್ರವಲ್ಲ ಜನರಿಗೂ ತೊಂದರೆಯಾಗುತ್ತಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸಚಿವರ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸಿ, ಮಾರುಕಟ್ಟೆ ನಿರ್ಮಾಣಕ್ಕೆ ಪೂರಕವಾದ ಪ್ರಯತ್ನಗಳನ್ನು ಮಾಡುವಂತೆ ಸಚಿವರು ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್, ಸಹಾಯಕ ಆಯುಕ್ತ ಹರ್ಷವರ್ಧನ್, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ರಾಮ ಕೆ. ಫಲಾನುಭವಿಗಳ ವಿವರ ನೀಡಿದರು. ಒಟ್ಟು 109 ಮಂದಿಗೆ ಪಿಂಚಣಿ, 94ಸಿ, 94ಸಿಸಿಯಡಿ ಆದೇಶ ಪತ್ರ ವಿತರಿಸಲಾಯಿತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…