ಶ್ರೀನಿವಾಸ ಕಲ್ಯಾಣೋತ್ಸವದ ಕರಪತ್ರ ಹಂಚುವ ಮೂಲಕ ಮತದಾರರಿಗೆ ಅಮಿಷ ಹೇರಲಾಗುತ್ತಿವೆ ಎಂದು ಪುತ್ತಿಲ ಪರಿವಾರಕ್ಕೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟೀಸ್ ಕಳುಹಿಸಲಾಗಿದೆ.
ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದ್ದು, ತನ್ನ ಕರಪತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಚಿಹ್ನೆ ಪ್ರಕಟಿಸಿ ಹಂಚುತ್ತಿದ್ದಾರೆ ಎನ್ನಲಾಗಿದೆ. ಡಿ. 27 ರಂದು ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳ ಉಪಚುನಾವಣೆ ನಡೆಯಲಿದ್ದು, ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ವಾರ್ಡ್ನಲ್ಲಿ ಸ್ಪರ್ಧಿಸುತ್ತಿರುವ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ನೋಟೀಸ್ ನೀಡಲಾಗಿದೆ. ಅನ್ನಪೂರ್ಣ ಕೆ.ಎಸ್.ರಾವ್ ಮತ್ತು ಚಿಂತನ್.ಪಿ ಯವರಿಗೆ ನೋಟೀಸ್ ಕಳುಹಿಸಲಾಗಿದ್ದು, ಮತದಾರರಿಗೆ ಉಚಿತ ಊಟ, ಹಣ,ಬಟ್ಟೆ, ದೇವರ ಪ್ರಸಾದ ನೀಡುವ ಅಮಿಷ ಹೇರಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಂಬAಧಿಸಿದ ಫಲಕಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…