ಶ್ರೀನಿವಾಸ ಕಲ್ಯಾಣೋತ್ಸವದ ಕರಪತ್ರ ಹಂಚುವ ಮೂಲಕ ಮತದಾರರಿಗೆ ಅಮಿಷ ಹೇರಲಾಗುತ್ತಿವೆ ಎಂದು ಪುತ್ತಿಲ ಪರಿವಾರಕ್ಕೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟೀಸ್ ಕಳುಹಿಸಲಾಗಿದೆ.
ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದ್ದು, ತನ್ನ ಕರಪತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಚಿಹ್ನೆ ಪ್ರಕಟಿಸಿ ಹಂಚುತ್ತಿದ್ದಾರೆ ಎನ್ನಲಾಗಿದೆ. ಡಿ. 27 ರಂದು ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳ ಉಪಚುನಾವಣೆ ನಡೆಯಲಿದ್ದು, ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ವಾರ್ಡ್ನಲ್ಲಿ ಸ್ಪರ್ಧಿಸುತ್ತಿರುವ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ನೋಟೀಸ್ ನೀಡಲಾಗಿದೆ. ಅನ್ನಪೂರ್ಣ ಕೆ.ಎಸ್.ರಾವ್ ಮತ್ತು ಚಿಂತನ್.ಪಿ ಯವರಿಗೆ ನೋಟೀಸ್ ಕಳುಹಿಸಲಾಗಿದ್ದು, ಮತದಾರರಿಗೆ ಉಚಿತ ಊಟ, ಹಣ,ಬಟ್ಟೆ, ದೇವರ ಪ್ರಸಾದ ನೀಡುವ ಅಮಿಷ ಹೇರಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಂಬAಧಿಸಿದ ಫಲಕಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…