ಉಡುಪಿ: ಹಿಜಾಬ್ ನಿಷೇಧ ಆದೇಶ ವಾಪಾಸ್ ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ಗೊಂದಲದಲ್ಲಿದೆ. ತಮ್ಮ ಗೊಂದಲಗಳನ್ನು ಮರೆಮಾಚಲು ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದೆ. ಜನರ ದಿಕ್ಕು ತಪ್ಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಆದೇಶ ಪ್ರತಿ ನಮ್ಮ ಕೈಗೆ ಸೇರಿಲ್ಲ. ಒಂದು ವೇಳೆ ಹಿಜಾಬ್ ನಿಷೇಧ ಆದೇಶ ಹಿಂದೆ ಪಡೆದುಕೊಂಡರೆ ಜೇನು ಗೂಡಿಗೆ ಕೈ ಹಾಕಿದಂತೆ. ವಿದ್ಯಾರ್ಥಿಗಳ ನಡುವಿನಲ್ಲಿ ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಂತೆ ಆಗುತ್ತದೆ. ಬಡ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಸಿಎಂ ಹೇಳಿಕೆಯನ್ನು ಕಾನೂನು ಮೂಲಕ ಎದುರಿಸಲು ನಾವು ಸಿದ್ದರಾಗಿದ್ದೇವೆ ಎಂದು ಗುಡುಗಿದರು.
ಆದೇಶ ಪತ್ರ ಕೈ ಸೇರಿದ ನಂತರ ಹಿರಿಯರ ಜೊತೆ ಮಾತನಾಡಿ ಹೋರಾಟ ನಡೆಸಲು ಸಿದ್ಧರಿದ್ದೇವೆ. ನೆಮ್ಮದಿಯಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸಿಎಂ ಅವರ ಹೇಳಿಕೆ ವಿದ್ಯಾರ್ಥಿಗಳಲ್ಲಿ ಮತ್ತೆ ಗೊಂದಲ ಉಂಟುಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…