ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಆದ್ರೆ ರಸ್ತೆ ರಿಪೇರಿ ಕಾರ್ಯ ಇನ್ನೂ ನಡೆಯದಿರುವುದು ಒಂದು ಕಡೆ ಬೇಸರಕ್ಕೆ ಕಾರಣವಾದರೆ ಇನ್ನೊಂದೆಡೆ ವಾಹನ ಸವಾರರು ಹೊಂಡಾಗುಂಡಿಗಳ ರಸ್ತೆಯಿಂದ ಬೇಸತ್ತು ಹೋಗಿದ್ದಾರೆ.
ಉಡುಪಿ ನಗರ ಭಾಗದ ರಸ್ತೆಯ ಅವ್ಯವಸ್ಥೆ ಇದು. ರಸ್ತೆ ಮಧ್ಯೆ ಹೊಂಡಾಗುಂಡಿ ಬಿದ್ದು ದ್ವಿಚಕ್ರ ವಾಹನ ಸವಾರರು ಕೈಕಾಲು ಮುರಿದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಉಡುಪಿಯ ಬೀಡಿನ ಗುಡ್ಡೆಯ ಬಳಿಯ ರಸ್ತೆ ಮಧ್ಯೆ ಅನೇಕ ಬೃಹತ್ ಗಾತ್ರ ಹೊಂಡ ಬಿದ್ದಿದ್ದು, ವಾಹನ ಸವಾರರ ಸಂಕಷ್ಟಕ್ಕೆ ಕಾರಣವಾಗಿದೆ. ಇನ್ನು ಚಿಟ್ಟಾಡಿಯಿಂದ ಹನುಮಾನ ಗ್ಯಾರೇಜ್ ಗೆ ಸಾಗುವ ರಸ್ತೆಯ ಅವ್ಯವಸ್ಥೆಯಂತೂ ಹೇಳ ತೀರದು ಇಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆ ಅಗೆದಿದ್ದು ಇದರ ಮರು ಡಾಂಬರೀಕರಣ ಮಾಡದೇ ಹಾಗೇ ಬಿಟ್ಟ ಪರಿಣಾಮ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ.
ಪರ್ಯಾಯ ಮಹೋತ್ಸವ ಎದುರಾದಾಗ ಕನಿಷ್ಟ ರಸ್ತೆಗಳು ಡಾಂಬರೀಕರಣಗೊಳ್ಳುತ್ತದೆ.ಆದ್ರೆ ಈ ಬಾರಿ ಎಲ್ಲಾ ಕಡೆಯ ರಸ್ತೆಗೆ ಈ ಭಾಗ್ಯ ಉಂಟಾ ಗೊತ್ತಿಲ್ಲ ಆದ್ರೆ ಅತೀ ಅಗತ್ಯವಾಗಿ ಆಗಬೇಕಾದ ಕಡೆ ಡಾಂಬರೀಕರಣ ಮಾಡಿ ಎಂಬುದು ಜನ ಸಮಾನ್ಯರ ಒತ್ತಾಯವಾಗಿದೆ. ನಗರಸಭೆಯಿಂದ ಐದು ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಕ್ಕಾಗಿ ಈಗಾಗಲೇ ಕೆಲಸ ಆರಂಭವಾಗಿದ್ದು ಆದಷ್ಟು ಬೇಗ ನಗರದ ಎಲ್ಲಾ ರಸ್ತೆಗಳಿಗೂ ಡಾಂಬರು ಭಾಗ್ಯ ಸಿಗಲಿ ಎಂಬುದು ಜನ ಸಾಮಾನ್ಯರ ಆಶಯವಾಗಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…