ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಆದ್ರೆ ರಸ್ತೆ ರಿಪೇರಿ ಕಾರ್ಯ ಇನ್ನೂ ನಡೆಯದಿರುವುದು ಒಂದು ಕಡೆ ಬೇಸರಕ್ಕೆ ಕಾರಣವಾದರೆ ಇನ್ನೊಂದೆಡೆ ವಾಹನ ಸವಾರರು ಹೊಂಡಾಗುಂಡಿಗಳ ರಸ್ತೆಯಿಂದ ಬೇಸತ್ತು ಹೋಗಿದ್ದಾರೆ.
ಉಡುಪಿ ನಗರ ಭಾಗದ ರಸ್ತೆಯ ಅವ್ಯವಸ್ಥೆ ಇದು. ರಸ್ತೆ ಮಧ್ಯೆ ಹೊಂಡಾಗುಂಡಿ ಬಿದ್ದು ದ್ವಿಚಕ್ರ ವಾಹನ ಸವಾರರು ಕೈಕಾಲು ಮುರಿದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಉಡುಪಿಯ ಬೀಡಿನ ಗುಡ್ಡೆಯ ಬಳಿಯ ರಸ್ತೆ ಮಧ್ಯೆ ಅನೇಕ ಬೃಹತ್ ಗಾತ್ರ ಹೊಂಡ ಬಿದ್ದಿದ್ದು, ವಾಹನ ಸವಾರರ ಸಂಕಷ್ಟಕ್ಕೆ ಕಾರಣವಾಗಿದೆ. ಇನ್ನು ಚಿಟ್ಟಾಡಿಯಿಂದ ಹನುಮಾನ ಗ್ಯಾರೇಜ್ ಗೆ ಸಾಗುವ ರಸ್ತೆಯ ಅವ್ಯವಸ್ಥೆಯಂತೂ ಹೇಳ ತೀರದು ಇಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆ ಅಗೆದಿದ್ದು ಇದರ ಮರು ಡಾಂಬರೀಕರಣ ಮಾಡದೇ ಹಾಗೇ ಬಿಟ್ಟ ಪರಿಣಾಮ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ.
ಪರ್ಯಾಯ ಮಹೋತ್ಸವ ಎದುರಾದಾಗ ಕನಿಷ್ಟ ರಸ್ತೆಗಳು ಡಾಂಬರೀಕರಣಗೊಳ್ಳುತ್ತದೆ.ಆದ್ರೆ ಈ ಬಾರಿ ಎಲ್ಲಾ ಕಡೆಯ ರಸ್ತೆಗೆ ಈ ಭಾಗ್ಯ ಉಂಟಾ ಗೊತ್ತಿಲ್ಲ ಆದ್ರೆ ಅತೀ ಅಗತ್ಯವಾಗಿ ಆಗಬೇಕಾದ ಕಡೆ ಡಾಂಬರೀಕರಣ ಮಾಡಿ ಎಂಬುದು ಜನ ಸಮಾನ್ಯರ ಒತ್ತಾಯವಾಗಿದೆ. ನಗರಸಭೆಯಿಂದ ಐದು ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಕ್ಕಾಗಿ ಈಗಾಗಲೇ ಕೆಲಸ ಆರಂಭವಾಗಿದ್ದು ಆದಷ್ಟು ಬೇಗ ನಗರದ ಎಲ್ಲಾ ರಸ್ತೆಗಳಿಗೂ ಡಾಂಬರು ಭಾಗ್ಯ ಸಿಗಲಿ ಎಂಬುದು ಜನ ಸಾಮಾನ್ಯರ ಆಶಯವಾಗಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…