ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಸಂಸ್ಥಾನದ ಒಡೆಯರ್ ಬೇಟಿ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಅರಮನೆಯ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮುಲ್ಕಿ ಸೀಮೆಯ ಬಪ್ಪನಾಡು ದೇವಸ್ಥಾನಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಮೈಸೂರು ಒಡೆಯರ್ ರವರನ್ನು ಶ್ರೀ ಕ್ಷೇತ್ರದ ವತಿಯಿಂದ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿಭವ್ಯವಾಗಿ ಸ್ವಾಗತಿಸಿದರು.

ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಒಡೆಯರ್ ರವರನ್ನು ಕ್ಷೇತ್ರದ ವತಿಯಿಂದ ಗೌರವಿಸಿ ಪ್ರಸಾದ ನೀಡಿದರು.
ಬಳಿಕ ಧಾರ್ಮಿಕ ಸಭೆಯಲ್ಲಿ ಮೈಸೂರ್ ಒಡೆಯರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆ ಧಾರ್ಮಿಕ, ಶೈಕ್ಷಣಿಕ ಸಹಿತ ಎಲ್ಲಾ ಕ್ಷೇತ್ರದಲ್ಲಿ ಮುಂದುವರೆದಿದ್ದು ಇಲ್ಲಿ ಬರುವುದೇ ಒಂದು ಭಾಗ್ಯ, ದಕ್ಷಿಣ ಕನ್ನಡ ಹಾಗೂ ಮೈಸೂರು ಸಂಸ್ಥಾನಕ್ಕೆ ಅವಿನಾಭಾವ ಸಂಬಂಧವಿದ್ದು ಇಲ್ಲಿನ ಜನರ ಸಂಸ್ಕಾರ ಹಾಗೂ ಸಂಸ್ಕೃತಿ ನೋಡುವುದೇ ಒಂದು ಭಾಗ್ಯ ಎಂದರು.


ಈ ಸಂದರ್ಭ ಅಳದಂಗಡಿಯ ಪದ್ಮಪ್ರಸಾದ ಅಜಿಲರು, ಸ್ವರೂಪ್ ಗೋಪಾಲ್ ರಾಜ್ ಆನಂದ್, ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಗೌತಮ್ ಜೈನ್ ಮುಲ್ಕಿ ಅರಮನೆ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ
ಮುಲ್ಕಿ ನಾಲ್ಕು ಪಟ್ನ ಮೊಗವೀರ ಸಭಾದ ಅಧ್ಯಕ್ಷ ಸುಜಿತ್ ಸಾಲ್ಯಾನ್, ಉದ್ಯಮಿ ಶರತ್ ಕರ್ಕೇರ ಹೊಸಬೆಟ್ಟು, ಮೊಗವೀರ ಮುಖಂಡ ಗುರುವಪ್ಪ ಕೋಟ್ಯಾನ್, ಸಂಜೀವ ದೇವಾಡಿಗ ನಾಗೇಶ್ ಬಪ್ಪನಾಡು, ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!