ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಅರಮನೆಯ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮುಲ್ಕಿ ಸೀಮೆಯ ಬಪ್ಪನಾಡು ದೇವಸ್ಥಾನಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಮೈಸೂರು ಒಡೆಯರ್ ರವರನ್ನು ಶ್ರೀ ಕ್ಷೇತ್ರದ ವತಿಯಿಂದ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿಭವ್ಯವಾಗಿ ಸ್ವಾಗತಿಸಿದರು.
ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಒಡೆಯರ್ ರವರನ್ನು ಕ್ಷೇತ್ರದ ವತಿಯಿಂದ ಗೌರವಿಸಿ ಪ್ರಸಾದ ನೀಡಿದರು.
ಬಳಿಕ ಧಾರ್ಮಿಕ ಸಭೆಯಲ್ಲಿ ಮೈಸೂರ್ ಒಡೆಯರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆ ಧಾರ್ಮಿಕ, ಶೈಕ್ಷಣಿಕ ಸಹಿತ ಎಲ್ಲಾ ಕ್ಷೇತ್ರದಲ್ಲಿ ಮುಂದುವರೆದಿದ್ದು ಇಲ್ಲಿ ಬರುವುದೇ ಒಂದು ಭಾಗ್ಯ, ದಕ್ಷಿಣ ಕನ್ನಡ ಹಾಗೂ ಮೈಸೂರು ಸಂಸ್ಥಾನಕ್ಕೆ ಅವಿನಾಭಾವ ಸಂಬಂಧವಿದ್ದು ಇಲ್ಲಿನ ಜನರ ಸಂಸ್ಕಾರ ಹಾಗೂ ಸಂಸ್ಕೃತಿ ನೋಡುವುದೇ ಒಂದು ಭಾಗ್ಯ ಎಂದರು.
ಈ ಸಂದರ್ಭ ಅಳದಂಗಡಿಯ ಪದ್ಮಪ್ರಸಾದ ಅಜಿಲರು, ಸ್ವರೂಪ್ ಗೋಪಾಲ್ ರಾಜ್ ಆನಂದ್, ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಗೌತಮ್ ಜೈನ್ ಮುಲ್ಕಿ ಅರಮನೆ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ
ಮುಲ್ಕಿ ನಾಲ್ಕು ಪಟ್ನ ಮೊಗವೀರ ಸಭಾದ ಅಧ್ಯಕ್ಷ ಸುಜಿತ್ ಸಾಲ್ಯಾನ್, ಉದ್ಯಮಿ ಶರತ್ ಕರ್ಕೇರ ಹೊಸಬೆಟ್ಟು, ಮೊಗವೀರ ಮುಖಂಡ ಗುರುವಪ್ಪ ಕೋಟ್ಯಾನ್, ಸಂಜೀವ ದೇವಾಡಿಗ ನಾಗೇಶ್ ಬಪ್ಪನಾಡು, ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…