ಮುಲ್ಕಿ: ಅರಮನೆ ವೆಲ್ ಫೇರ್ ಮತ್ತು ಚಾರಿಟೆಬಲ್ ಟ್ರಸ್ಟ್ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪ ರೇಟಿವ್ ಸೊಸೈಟಿ ಆಶ್ರಯದಲ್ಲಿ ಮುಲ್ಕಿ ಸೀಮೆ ಅರಸು ಕಂಬಳದ ಅಂಗವಾಗಿ ಅರಸು ಪ್ರಶಸ್ತಿ ಸಮಾರಂಭ ಪಡು ಪಣಂಬೂರು ಮುಲ್ಕಿ ಅರಮನೆಯ ಕಾಂತಾಬಾರೆ ಬೂದಾಬಾರೆ ಧರ್ಮಚಾವಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ವಹಿಸಿದ್ದರು. ಮೈಸೂರು ಸಂಸ್ಥಾನದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರು ಕಂಬಳ ಕ್ಷೇತ್ರದಲ್ಲಿನ ಸಾಧನೆಗೆ ದಿ. ಪಯ್ಯೋಟ್ಟು ಸದಾಶಿವ ಸಾಲ್ಯಾನ್ (ಮರಣೋತ್ತರ) ಸಾಮಾಜಿಕ ಕ್ಷೇತ್ರದಲ್ಲಿ ಉತ್ರುಂಜೆ ಭುಜಂಗ ಎಂ. ಶೆಟ್ಟಿ, ತುಳು- ಸಾಂಸ್ಕೃತಿಕ ಕ್ಷೇತ್ರದಲ್ಲಿ ನವೀನ್ ಶೆಟ್ಟಿ ಎಡ್ಮೆಮಾರ್, ಕೃಷಿ ಕ್ಷೇತ್ರದ ಸಾಧಕ ಗಂಗಾಧರ ದೇವಾಡಿಗ, ಕ್ರೀಡಾ ಕ್ಷೇತ್ರದಲ್ಲಿ ಸುಷ್ಮಾ ತಾರಾನಾಥ್, ವೈದ್ಯಕೀಯ ಕ್ಷೇತ್ರದಲ್ಲಿ ಹಳೆಯಂಗಡಿಯ ಡಾ.ಗುರುಪ್ರಸಾದ್ ನಾವಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
ಮಾಜೀ ಸಚಿವ ಕೆ.ಅಭಯಚಂದ್ರ ಜೈನ್, ಮೈಸೂರಿನ ಡಾ. ಉಮೇಶ್, ಕ್ಯಾ. ಬ್ರಿಜೇಶ್ ಚೌಟ, ಗೋಕುಲ್ ದಾಸ್ ಪೈ, ಚಿತ್ತ ರಂಜನ್ ಬೋಳಾರ, ದಿವಾಕರ ಕದ್ರಿ, ವಿವೇಕ್ ಆಳ್ವ ಮೂಡುಬಿದಿರೆ, ಡಾ. ಗಣೇಶ್ ಅಮೀನ್ ಸಂಕಮಾರ್, ರಂಜಿತ್ ಕೋಟ್ಯಾನ್ , ಟ್ರಸ್ಟ್ ನ ಗೌತಮ್ ಜೈನ್ ಮುಲ್ಕಿ ಅರಮನೆ, ವಿವೇಕ್ ಆಳ್ವ, ಮೋಹನ್ ದಾಸ್ ಸುರತ್ಕಲ್, ರಾಮಚಂದ್ರ ನಾಯಕ್ ಕೊಲ್ನಾಡು ಗುತ್ತು, ಪ್ರಿಯ ದರ್ಶಿನಿ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾರ್ಡ್ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಅಮೀನ್ ಸಂಕಮಾರ್ ನಿರೂಪಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…