ಮಂಗಳೂರು: ಡಿ 23, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರು ಇದರ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮ್ಮಿಲನ-2023 ಆದಿತ್ಯವಾರದಂದು ಕೆನರಾ ಪ್ರೌಢಶಾಲೆ,ಕೊಡಿಯಾಲ್ ಬೈಲ್ ಇಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಶತಮಾನಗಳಷ್ಟು ಹಳೆಯದಾದ ಮಹಾತ್ಮ ಗಾಂಧಿ ಮ್ಯೂಸಿಯಂನ ಉದ್ಘಾಟನೆಯು ನೆರವೇರಿತು.ಭಾರತ ಸರಕಾರದ ಪುರಾತತ್ವ ಮತ್ತುಉತ್ಖನನ ಇಲಾಖೆಯ ಮಾಜಿ ನಿರ್ದೇಶಕರಾದ ಶ್ರೀ ರಾಮಚಂದ್ರ ಹೆಗಡೆ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಮಾಜಿ ಪ್ರಾಧ್ಯಾಪಕರು ಶ್ರೀ ಮುರುಗೇಶ್ ತುರುವೇಕೆರೆ, ಕೇರಳ ಸರ್ಕಾರದ ಪುರಾತತ್ವ ಇಲಾಖೆಯ ಡಾ.ವಿ.ಆರ್.ಶಾಜಿ, ಶ್ರೀ ಪ್ರಭಾಕರ ಕಿಣಿ , ಶ್ರೀ ರಾಮದಾಸ್ ಪ್ರಭು,ಮಹಾತ್ಮ ಗಾಂಧಿ ಮ್ಯೂಸಿಯಂನ ಪುನರ್ವಿನ್ಯಾಸಕ್ಕೆ ಕೊಡುಗೆ ನೀಡಿದ ಶ್ರೀ ಸುಜಯ್ ಲೋಬೋ ದೀಪ ಬೆಳಗಿಸಿ ಮ್ಯೂಸಿಯಂ ನ ಉದ್ಘಾಟನೆ ಮಾಡಿದರು. ಮ್ಯೂಸಿಯಂ ನಿರ್ದೇಶಕರಾದ ಶ್ರೀ ಪಯ್ಯನೂರು ರಮೇಶ್ ಪೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೆನರಾ ಹಳೆ ವಿದ್ಯಾರ್ಥಿಗಳ ಜಾಗತಿಕ ಸಮಾವೇಶದ ದಿನ ಜರುಗಿದ ಈ ವಿಶಿಷ್ಟ ಪೂರ್ಣ ಕಾರ್ಯಕ್ರಮವು ಪುರಾತನ ವಸ್ತುಗಳು ಹಾಗೂ ಶಾಸನ ಶಾಸ್ತ್ರದ ಆಸಕ್ತಿ ಉಳ್ಳವರ ಮನಸೆಳೆಯಿತು. ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಈ ಮ್ಯೂಸಿಯಂನ ವೀಕ್ಷಣೆಗೆ ಮುಕ್ತ ಅವಕಾಶವನ್ನು ನೀಡಲಾಯಿತು.
ಕೆನರಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ವಾಸುದೇವ ಕಾಮತ್, ಕಾರ್ಯದರ್ಶಿ ಶ್ರೀ ಎಂ.ರಂಗನಾಥ್ ಭಟ್,ಸದಸ್ಯರಾದ ಶ್ರೀ ಸುರೇಶ್ ಕಾಮತ್ ,ಶ್ರೀ ಗೋಪಾಲಕೃಷ್ಣ ಶೆಣೈ CA ಎಂ.ವಾಮನ್ ಕಾಮತ್, ಶ್ರೀ ಬಸ್ತಿ ಪುರುಷೋತ್ತಮ ಶೆಣೈ, ಶ್ರೀ ಶಿವಾನಂದ ಶೆಣೈ, ಶ್ರೀ ಯೋಗೀಶ್ ಕಾಮತ್, ಶ್ರೀ ನರೇಶ್ ಶೆಣೈ, ಶ್ರೀಮತಿ ಅಶ್ವಿನಿ ಕಾಮತ್, ಶ್ರೀ ಗೋಪಿನಾಥ್ ಭಟ್, ಶ್ರೀ ಯೋಗೀಶ್ ಕಾಮತ್, ಆಡಳಿತ ಅಧಿಕಾರಿ ಡಾ. ದೀಪ್ತಿ ನಾಯಕ್, ಪಿ ಆರ್ ಒ ಶ್ರೀಮತಿ ಉಜ್ವಲ್ ಮಲ್ಯ, ಸಮ್ಮಿಲನದ ಉಸ್ತುವಾರಿ ಶ್ರೀ ಗೋಪಾಲಕೃಷ್ಣ ಶೆಟ್ಟಿ,ಕೆನರಾ ಸಹೋದರಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರುಗಳು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ,ಸಂಸ್ಥೆಯ ಹಳೆಯ ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು..
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…